ಬೆಂಗಳೂರು | ಸಹೋದರಿ ಕೊಲೆ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

Date:

Advertisements

ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಶಿಕ್ಷೆಯನ್ನು ಮಾರ್ಪಡಿಸಿದೆ.

ಅಲ್ಲದೆ, 2018ರ ಜುಲೈ 26ರಂದು ಬಂಧನಕ್ಕೊಳಗಾದಾಗಿನಿಂದ 6 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ ಎಂಬ ಅಂಶವನ್ನು ಪರಿಗಣಿಸಿದ ಪೀಠ, ಅಣ್ಣಪ್ಪಗೆ ವಿಧಿಸಿದ್ದ ಶಿಕ್ಷೆಯನ್ನು ಆ ಅವಧಿಗೆ ನಿಗದಿಪಡಿಸಿ, 10,000 ರೂಗಳ ದಂಡ ಪಾವತಿಸಲು ಸೂಚನೆ ನೀಡಿದೆ.

Advertisements

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಸಲೂನ್ ನಡೆಸುತ್ತಿದ್ದ ಅಣ್ಣಪ್ಪ ಭಂಡಾರಿ 2018ರ ಜುಲೈ 22ರಂದು ತನ್ನ ಸಹೋದರಿ ವಿಜಯ ಭಂಡಾರಿ ಜೊತೆ ಜಗಳವಾಡಿದ್ದ. ಅಣ್ಣಪ್ಪ ಭಂಡಾರಿ ತನ್ನ ಸಹೋದರಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದು, ವಿಜಯಾ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ವಿಜಯಾರ ಎಡಭುಜದ ಬಳಿ, ಬೆನ್ನಿನ ಬಲಭಾಗದಲ್ಲಿ ಗಾಯಗಳಾಗಿದ್ದವು. ಬಳಿಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಜುಲೈ 28ರಂದು ಆಕೆ ಮೃತಪಟ್ಟಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, ಪ್ರತ್ಯಕ್ಷ ಸಾಕ್ಷ್ಯಾಧಾರಗಳಾದ ಮೃತ ವಿಜಯಾ ಸಹೋದರಿ ಮತ್ತು ಸೋದರಳಿಯ, ಸುಶೀಲಾ ಮತ್ತು ಕಮಲಾಕ್ಷಿ ಎಂಬುವರ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿ ಅಣ್ಣಪ್ಪ ಭಂಡಾರಿಗೆ ಕೊಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆ ಪ್ರಶ್ನಿಸಿ ಅವರು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಗಾಯವು ಕುತ್ತಿಗೆ ಭಾಗದ ರಕ್ತನಾಳಗಳಿಗೆ ಹಾನಿಯಾಗದಂತೆ ಮೇಲ್ನೋಟಕ್ಕೆ ಕಾಣುತ್ತದೆ. ಆರಂಭಿಕ ಹಂತದಲ್ಲಿ ಗಮನಿಸಲಾದ ನಾಡಿಮಿಡಿತ ಮತ್ತು ರಕ್ತದೊತ್ತಡದಲ್ಲಿ (ಬಿಪಿ) ಯಾವುದೇ ಹೃದಯ ಸಂಬಂಧಿತ ಸಮಸ್ಯೆ ಅಥವಾ ಕಾಯಿಲೆಯನ್ನು ನಿರೀಕ್ಷಿಸಲು ಅಸಹಜವಾಗಿ ಹೆಚ್ಚಾಗಿರಲಿಲ್ಲ. ಈ ದೃಷ್ಟಿಕೋನದಲ್ಲಿ ಮೃತ ವಿಜಯಾ ಭಂಡಾರಿಗೆ ತಮಗಾದ ಗಾಯಗಳಿಂದಾಗಿ ಹೃದಯಸ್ತಂಭನ ಸಂಭವಿಸಿದೆ ಎಂಬ ವೈದ್ಯರ ಅಭಿಪ್ರಾಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X