ಜಮ್ಮು ಕಾಶ್ಮೀರದ ಕಥುವಾದಲ್ಲಿ ಮತ್ತೆ ಎನ್‌ಕೌಂಟರ್; ಸೇನೆ ಬಲೆಯಲ್ಲಿ ಮೂವರು ಉಗ್ರರು

Date:

Advertisements

ಜಮ್ಮು ಕಾಶ್ಮೀರದ ಕಥುವಾದಲ್ಲಿ ಸೋಮವಾರ ಉಗ್ರರ ಮತ್ತು ಭದ್ರತಾ ಪಡೆಯ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಸೇನೆಯತ್ತ ಉಗ್ರರು ಗುಂಡು ಹಾರಿಸಿದ ಬೆನ್ನಲ್ಲೇ ಈ ಚಕಮಕಿ ಆರಂಭವಾಗಿದೆ. ಕಳೆದ 9 ದಿನದಲ್ಲಿ ಕಥುವಾದಲ್ಲಿ ನಡೆಯುತ್ತಿರುವ 3ನೇ ಕಾರ್ಯಾಚರಣೆ ಇದಾಗಿದೆ.

ರಾಮಕೋಟೆ ಪ್ರದೇಶದ ಪಂಜ್‌ತೀರ್ಥಿಯಲ್ಲಿ ನಡೆದಿರುವ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರಾತ್ರಿ ವಿಧಿಸಿರುವ ಪಹರೆಯಲ್ಲಿ ಮೂವರು ಉಗ್ರಗಾಮಿಗಳು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದ್ದು, ಇವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇಪ್ಪತ್ತು ಗಂಟೆಗಳ ಸುಧೀರ್ಘ ಕಾರ್ಯಾಚರಣೆಯಲ್ಲಿ ಇಬ್ಬರು ಜೈಶ್-ಇ-ಮೊಹ್ಮದ್ ಸಂಘಟನೆ ಉಗ್ರರು ಹತರಾದ ಎರಡು ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಕಳೆದ ಗುರುವಾರ ಮಾ.27ರಂದು ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಸೈನಿಕರು ಮೃತಪಟ್ಟಿದ್ದರು. ಕಾಡಿನಲ್ಲಿ ಅಡಗಿಕೊಂಡಿದ್ದ ಪಾಕಿಸ್ತಾನಿ ಉಗ್ರರ ಜತೆ ಈ ಚಕಮಕಿ ನಡೆದಿತ್ತು. ಮಾ.23 ರಂದು ಸೇನೆ ಹಾಗೂ ಉಗ್ರರ ನಡುವೆ ನಡೆದ ಕಾಳಗದಲ್ಲಿ ಒಬ್ಬ ಸ್ಥಳೀಯ ಬಾಲಕಿ ಗಾಯಗೊಂಡಿದ್ದಳು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಉಗ್ರಗಾಮಿಗಳು ಎನ್ನಲಾದ ಮೂವರು ತಪ್ಪಿಸಿಕೊಂಡಿದ್ದಾರೆ ಹಾಗೂ ಅವರ ಸಂಶಯಾಸ್ಪದ ಚಲನ ವಲನ ಕಂಡುಬರುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ವೈಮಾನಿಕ ಕಣ್ಗಾವಲು ಮತ್ತು ಶ್ವಾನಪಡೆಯ ಸಹಾಯದಿಂದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಡಿಐಜಿ ಶಿವಕುಮಾರ್ ಶರ್ಮಾ, ಕಟ್ಟಕಡೆಯ ಉಗ್ರಗಾಮಿ ಹತನಾಗುವವರೆಗೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಯಾವುದೇ ಅನುಮಾನಾಸ್ಪದ ಚಲನ ವಲನಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಗಡಿಭಾಗದ ನಿವಾಸಿಗಳಲ್ಲಿ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X