ಧಾರವಾಡ | ಹಾಲು, ವಿದ್ಯುತ್ ದರ ಏರಿಕೆ: ತಕ್ಷಣ ಹಿಂಪಡೆಯಲು ಒತ್ತಾಯ

Date:

Advertisements

ರಾಜ್ಯದಲ್ಲಿ ಶಾಸಕರಿಗೆ, ಸಚಿವರಿಗೆ ವೇತನ ಹೆಚ್ಚಳದ ಸಿಹಿಯನ್ನು ನೀಡಿ, ಜನರಿಗೆ ಮತ್ತೆ ಹಾಲಿನ ದರ ಮತ್ತು ವಿದ್ಯುತ್ ದರ ಏರಿಸಿ ಕಹಿಯನ್ನು ಉಣಬಡಿಸಿರುವ ಸರ್ಕಾರದ ನೀತಿಯನ್ನು ಖಂಡಿಸಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣವರ ಮಾತನಾಡಿ, ಹೈನುಗಾರರ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಎಂಬುದು ನಿಜವೇ. ಇದನ್ನು ಕಡಿಮೆ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಪಶು ಆಹಾರ, ಮೇವು, ಪಶು ವೈದ್ಯಕೀಯ ವೆಚ್ಚ ಮೊದಲಾದ ಹೈನುಗಾರಿಕೆಯ ಒಳಸುರಿಗಳ ವೆಚ್ಚವನ್ನು ಸರ್ಕಾರ ಕಡಿತ ಮಾಡಬೇಕಿತ್ತು; ಬದಲಿಗೆ ಪ್ರತಿಬಾರಿಯೂ ವೆಚ್ಚದ ಹೊರೆಯನ್ನು ಸಾಮಾನ್ಯ ಗ್ರಾಹಕರ ಮೇಲೆ ಹೇರುವುದು ಜನಪರ ಸರ್ಕಾರದ ನೀತಿಯೇ ಎಂದು ಪ್ರಶ್ನಿಸಿದರು.

ಇನ್ನು ವಿದ್ಯುತ್ ದರವನ್ನು ಮತ್ತೆ ಪರಿಷ್ಕರಣೆ ಮಾಡಲಾಗಿದೆ. ಸಧ್ಯಕ್ಕೆ ಗೃಹಜ್ಯೋತಿ ಯೋಜನೆಯ ಕಾರಣಕ್ಕೆ ಇದರಿಂದ ಬಹುಪಾಲು ಗೃಹ ಬಳಕೆದಾರರಿಗೆ ಸಮಸ್ಯೆ ಆಗದೇ ಇರಬಹುದು. ಆದರೆ ವಾಣಿಜ್ಯ ಮತ್ತು ಸಣ್ಣ ಕೈಗಾರಿಕೆಗಳಿಗೆ ಇದು ವಿದ್ಯುತ್ ದುಬಾರಿ ಮತ್ತು ಅಂತಿಮವಾಗಿ ಉತ್ಪನ್ನಗಳ ದರ ಹೆಚ್ಚಳ ಮಾಡಿ ಇದರಿಂದ ಬಡ, ಮಧ್ಯಮ ವರ್ಗದ ಜನರ ಮೇಲೆಯೇ ಹೊರೆ ಬೀಳಲಿದೆ ಎಂದರು.

Advertisements

ಕೆಎಂಎಫ್ ಮತ್ತು ವಿದ್ಯುತ್ ಕಂಪನಿಗಳ ದಕ್ಷತೆಯನ್ನು ಹೆಚ್ಚಿಸಿ, ಸೋರಿಕೆ, ಭ್ರಷ್ಟಾಚಾರ, ದುಂದುವೆಚ್ಚ ನಿಯಂತ್ರಣ ಮಾಡುವ ಕಡೆಗೆ ಸರ್ಕಾರ ಗಮನ ಹರಿಸದೇ ಇರುವುದು ಖಂಡನೀಯ. ಅಷ್ಟೇ ಅಲ್ಲದೆ ರಾಜ್ಯದಲ್ಲಿ ಸರ್ಕಾರಿ ನೌಕರಿಗೆ ಹಾಗೂ ಇತರ ಕಾರ್ಮಿಕರಿಗೆ ವೇತನ ಹೆಚ್ಚಳ ಮಾಡದೇ, ಕೇವಲ ಸಚಿವರು, ಶಾಸಕರ ವೇತನವನ್ನು ಶೇಕಡ 100 ರಷ್ಟು ಹೆಚ್ಚಳ ಮಾಡಿ ಅದರ ಹೊರೆಯನ್ನು ಬಡ, ಮಧ್ಯಮ ವರ್ಗದ ಜನಗಳ ಮೇಲೆ ಹೇರಿರುವುದನ್ನು ಒಪ್ಪಲು ಸಾಧ್ಯವಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಬೆಲೆ ಏರಿಕೆ ಒಂದು ಪ್ರಮುಖ ಅಸ್ತ್ರವಾಗಿತ್ತು ಎಂಬುದನ್ನು ಕಾಂಗ್ರೆಸ್ ಪಕ್ಷ ಮರೆತಿದೆ. ಜನತೆ ಇದನ್ನು ಒಪ್ಪುವುದಿಲ್ಲ ಎಂಬುದನ್ನು ಅರಿತು ಈ ದರ ಏರಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಸದಸ್ಯ ದೀಪಾ ಧಾರವಾಡ ವಹಿಸಿದ್ದರು. ಈ ಸಂದರ್ಭದಲ್ಲಿ ಭವಾನಿಶಂಕರ ಗೌಡರ್, ಶರಣು ಗೋನವಾರ, ಶಶಿಕಲಾ ಮೇಟಿ, ದೇವಮ್ಮ ದೇವತಕಲ್, ರಣಜಿತ್ ದೂಪದ್, ಪ್ರೀತಿ ಸಿಂಗಾಡಿ, ಸಿಂಧು ಕೌದಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X