ದಾವಣಗೆರೆ | ಕರ್ನಾಟಕ ರಾಷ್ಟ್ರ ಸಮಿತಿಯ ಯುವ ಕಾರ್ಯಕರ್ತರಿಗೆ ತುಮಕೂರಿನಲ್ಲಿ ನಾಯಕತ್ವ ತರಬೇತಿ

Date:

Advertisements

“ಯುವ ಕಾರ್ಯಕರ್ತರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏಪ್ರಿಲ್ 3 ಮತ್ತು ಎಪ್ರಿಲ್ 6ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ” ಎಂದು ಕೆಆರ್ ಎಸ್ ಪಕ್ಷದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಂ.ಬಸವರಾಜಯ್ಯ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು “ತರಭೇತಿ ಶಿಬಿರದಲ್ಲಿ ಸ್ವ ಅರಿವು ಮತ್ತು ಸ್ವ ವಿಮರ್ಶೆ ಜೊತೆಗೆ ನಾನೇಕೆ ರಾಜಕೀಯ ನಾಯಕತ್ವ ವಹಿಸಬೇಕು. ತನ್ನ ಸುತ್ತಮುತ್ತಲಿನ ಸಮಕಾಲೀನ ಸಮಸ್ಯೆಗಳನ್ನು ಮುಖಾಮುಖಿಯಾಗಿ ಸಮರ್ಥವಾಗಿ ಹೇಗೆ ಎದುರಿಸಬೇಕು? ಪ್ರಾಮಾಣಿಕ ರಾಜಕೀಯ, ಪ್ರಸ್ತುತ ರಾಜಕೀಯ, ಸಮಕಾಲೀನ ಚಿಂತನೆಗಳಲ್ಲದೆ ನಾಯಕತ್ವ ಅರ್ಥ, ವಿಧಗಳು ಇತ್ಯಾದಿ ವಿಷಯ ತಿಳಿಸಲಾಗುತ್ತದೆ” ಎಂದರು

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್ ಬಿ ಐ ಬ್ಯಾಂಕ್ ಕಳ್ಳತನ ಪ್ರಕರಣ, ಸಾಲ ನಿರಾಕರಿಸಿದ್ದಕ್ಕೆ ಬ್ಯಾಂಕ್ ದರೋಡೆ.

Advertisements

“ಭಾಷಣ ಕಲೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಯ ಕೌಶಲ್ಯಗಳನ್ನು ತರಬೇತಿ ಒಳಗೊಂಡಿದೆ. ಶಿಬಿರವು ಸಮಾಜದ ಉತ್ತಮ ನಾಯಕಿಯರು, ನಾಯಕರಾಗಲು ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುತ್ತದೆ. ಯುವ ಪೀಳಿಗೆಯಲ್ಲಿನ ನಾಯಕಿಯರು, ನಾಯಕರನ್ನು ವಿಮರ್ಶೆಗೊಳಪಡಿಸಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ.‌ ಈ ತರಬೇತಿ ಶಿಬಿರವು 2 ದಿನ ನಡೆಯಲಿದ್ದು, 2 ದಿನವೂ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು. ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು. ಹಾಗೇ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಭಾಗವಹಿಸುವವರು ತಮ್ಮ ಹೆಸರನ್ನು ನೋಂದಾಯಿಸಲು 7619353525, 8749065597 ಸಂಪರ್ಕಿಸಲು ಕೋರಿದರು.

ಈ ಸುದ್ದಿಯನ್ನು ಓದಿ; ಚಿತ್ರದುರ್ಗ | ಹಬ್ಬಕ್ಕೆ ಗ್ರಾಮ ಸ್ವಚ್ಛಗೊಳಿಸದ ಬಂಡ ಅಧಿಕಾರಿಗಳು, ರೊಚ್ಚಿಗೆದ್ದ ವೃದ್ಧನಿಂದ ಚರಂಡಿ ಸ್ವಚ್ಛತೆ

ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯ ಪುಟ್ಟನಾಯ್ಕ, ಕೆ.ಎಸ್.ವೀರಭದ್ರಪ್ಪ, ವಿ.ಬಿ.ಕೃಷ್ಣ, ಮಂಜುನಾಥ್ ಹಳ್ಳಿಕೆರೆ, ರಾಘವೇಂದ್ರ, ಸುರೇಶ್ ಸಂಗೇನಹಳ್ಳಿ, ಟಿ.ಅಜೇಶ್ ಹಾಗೂ ಮುಖಂಡರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X