‘ಈದಿನ’ ಫಲಶ್ರುತಿ | ಕಂದಕಕ್ಕೆ ಬಿದ್ದು ಹಸು ಸಾವು ಪ್ರಕರಣ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

Date:

Advertisements

ಕಂದಕದಲ್ಲಿ ಬಿದ್ದು ಹಸು ಮೃತಪಟ್ಟಿದ್ದ ಸ್ಥಳಕ್ಕೆ ವಡೀಗೇರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಬಸವರಾಜ ಸಜ್ಜನ್ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಚಂದುಲಾಲ್ ಎಇಇ ಹಾಗೂ ವಾಸುದೇವ ಜೈ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಯಾದಗಿರಿ ಜಿಲ್ಲೆ ವಡಗೇರಿ ತಾಲೂಕಿನ ಮಳ್ಳಳ್ಳಿ ಗ್ರಾಮದ ಮಲ್ಲಪ್ಪ ಹಣಮಂತ ಬಳಿಚಕ್ರ ಎಂಬುವವರ ಹಸು ರಸ್ತೆಯ ಸೇತುವೆ ಕಂದಕಕ್ಕೆ ಬಿದ್ದು ಮೃತಪಟ್ಟಿತ್ತು. ಇದಕ್ಕೆ ಪರಿಹಾರ ನೀಡಿ ಸಮರ್ಪಕ ರಸ್ತೆ ನಿರ್ಮಾಣ ಮಾಡಬೇಕು ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದರು.

ಸಾಮಾಜಿಕ ಹೋರಾಟಗಾರರ ಆಗ್ರಹದ ಹಿನ್ನೆಲೆಯಲ್ಲಿ ಈದಿನ.ಕಾಮ್‌, ‘ಯಾದಗಿರಿ | ಕಂದಕಕ್ಕೆ ಬಿದ್ದು ಹಸು ಸಾವು; ಪರಿಹಾರಕ್ಕೆ ಆಗ್ರಹʼ ಎಂಬ ತಲೆಬರಹಲ್ಲಿ ವರದಿ ಪ್ರಕಟಿಸಿತ್ತು. ಬಳಿಕ ತಾಲೂಕು ಪಂಚಾಯಿತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements

ಎಇಇ ಚಂದುಲಾಲ್ ಮಾತನಾಡಿ, “ಕಂದಕ ಉಂಟಾಗಿರುವ ಸ್ಥಳಗಳಲ್ಲಿ ಕೂಡಲೇ ಮರ್ಮ್ ಹಾಕಿ ತಗ್ಗು ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರಿಗೆ ಸುಗಮವಾಗಿ ಓಡಾಡಲು ಅನುಕೂಲ ಮಾಡಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಾಳೆಯೇ ನಾಲ್ಕು ಸಿಡ್ಡಿ ಮತ್ತು ಗುರುಸುಣಿಗಿ ಮಳ್ಳಳ್ಳಿ ಮಾರ್ಗದಲ್ಲಿ ಹದಗೆಟ್ಟಿರುವ ರಸ್ತೆಯ ಅಂದಾಜು ಪಟ್ಟಿ ತಯಾರಿಸಿ ಸ್ಥಳೀಯ ಶಾಸಕ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ವೇಳೆ ದೂರವಾಣಿ ಮುಖಾಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಮಾತನಾಡಿ, ಅಲ್ಲಿನ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಸುವಾವುದಾಗಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕಂದಕಕ್ಕೆ ಬಿದ್ದು ಹಸು ಸಾವು; ಪರಿಹಾರಕ್ಕೆ ಆಗ್ರಹ

ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮುದ್ನಾಳ ಮಾತನಾಡಿ, “ಅಧಿಕಾರಿಗಳು ಹಸು ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಸಮಸ್ಯೆ ಕುರಿತು ಸುದ್ದಿ ಮಾಡಿ ಸಂಬಂಧಪಟ್ಟವರ ಗಮನಕ್ಕೆ ತಂದ
ಈ ದಿನ.ಕಾಮ್ ಮಾಧ್ಯಮ ಸಂಸ್ಥೆಗೆ ಧನ್ಯವಾದಗಳು” ಎಂದರು.

ಇದೇ ಸಂದರ್ಭದಲ್ಲಿ ರೈತರಾದ ಪ್ರಭು ಕೊಡಲ್, ಶರಣಪ್ಪ, ಅಂಬ್ರೇಶ್ ತೆಲುಗುರ್, ಚಂದ್ರು ಅಲಿಗಿ, ಶಂಕರ್ ಹೆಳವರ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X