30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ: ಕೇಂದ್ರ ಸರ್ಕಾರ

Date:

Advertisements

ದೇಶದಲ್ಲಿ ಸುಮಾರು 30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಬುಧವಾರ ರಾಜ್ಯಸಭೆಗೆ ತಿಳಿಸಿದೆ. ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್ ಈ ಮಾಹಿತಿ ನೀಡಿದ್ದಾರೆ.

ಮಕ್ಕಳ ದತ್ತು ಸಂಪನ್ಮೂಲ ಮಾಹಿತಿ ಮತ್ತು ಮಾರ್ಗದರ್ಶನ ವ್ಯವಸ್ಥೆ (CARINGS) ಪೋರ್ಟಲ್‌ನ ದತ್ತಾಂಶದ ಪ್ರಕಾರ, 32,856 ಭಾರತೀಯ ಪೋಷಕರು ಮತ್ತು 859 ವಿದೇಶಿ ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಸಚಿವೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್‌ | ʻನನ್ನ ಪತ್ನಿ ಗರ್ಭಿಣಿʼ ಎಂದ ಅತ್ಯಾಚಾರ ಆರೋಪಿ; ಹೈಕೋರ್ಟ್‌ ಸಂಧಾನ ವಿಫಲ

Advertisements

ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳ ಸುರಕ್ಷತೆ, ಭದ್ರತೆ, ಘನತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ. ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ಅಡಿಯಲ್ಲಿ ಈ ದತ್ತು ಪ್ರಕ್ರಿಯೆ ನಡೆಯುತ್ತದೆ.

ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಜ್ಯ ದತ್ತು ಸ್ವೀಕಾರ ಸಂಪನ್ಮೂಲ ಸಂಸ್ಥೆಗಳು, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳಂತಹ ಸಂಸ್ಥೆಗಳ ಮೂಲಕ ಈ ಪ್ರಕ್ರಿಯೆ ನಡೆಸುತ್ತಾರೆ.

ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ತಿದ್ದುಪಡಿ ನಿಯಮಗಳು, 2022 ದತ್ತು ಸಂಬಂಧಿತ ವಿಷಯಗಳಲ್ಲಿ ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಿದೆ. ಪ್ರಸ್ತುತ ಪೋರ್ಟಲ್ ಪ್ರಕಾರ ದೇಶದಲ್ಲಿ ಕೇವಲ 22 ದತ್ತು ಆದೇಶಗಳು ಬಾಕಿ ಉಳಿದಿವೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉಗಾಂಡ ಮಗು ದತ್ತು | ಭಾರತೀಯ ದಂಪತಿಗೆ ಮಾನ್ಯತೆ ನೀಡಲು ಹೈಕೋರ್ಟ್‌ ಸೂಚನೆ

ದತ್ತು ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ನಡೆಯುತ್ತದೆ. ಎಲ್ಲಾ ಮಾಹಿತಿ ಪೋರ್ಟಲ್‌ನಲ್ಲಿ ಪಾರದರ್ಶಕವಾಗಿದೆ. ಪೋರ್ಟಲ್‌ನಲ್ಲಿ ಅಕ್ರಮ ದತ್ತು ನೋಂದಾವಣೆಗೆ ಯಾವುದೇ ಅವಕಾಶ ಇಲ್ಲ ಎಂದಿದ್ದಾರೆ.

2024-25ರ ಆರ್ಥಿಕ ವರ್ಷದಲ್ಲಿ 4,515 ದತ್ತು ದಾಖಲಾಗಿದೆ. ಭಾರತವು ಮಕ್ಕಳ ದತ್ತು ಸ್ವೀಕಾರದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಕಳೆದ 12 ವರ್ಷಗಳಲ್ಲಿ ಇದು ಅತ್ಯಧಿಕ ಅಂಕಿ ಅಂಶವಾಗಿದೆ. ಒಟ್ಟು ದತ್ತು ಸ್ವೀಕಾರಗಳಲ್ಲಿ 3,950 ದೇಶೀಯವಾಗಿದ್ದರೆ, 565 ಅಂತಾರಾಷ್ಟ್ರೀಯವಾಗಿವೆ ಎಂದು ಸಚಿವಾಲಯ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X