ಬೀದರ್ | ಬಸವಕಲ್ಯಾಣ ನಗರಸಭೆ ಸಿಬ್ಬಂದಿ ಕೊಲೆ ಪ್ರಕರಣ : ಆರೋಪಿ ಬಂಧನ

Date:

Advertisements

ಬಸವಕಲ್ಯಾಣ ನಗರಸಭೆ ಪೌರ ಕಾರ್ಮಿಕಳಾಗಿದ್ದ ರೇಷ್ಮಾ ಶೇಖ್ ಹೈದರ್ (34) ಕೊಲೆಗೆ ಸಂಬಂಧಿಸಿದಂತೆ ಆರೋಪಿ ಸಂತೋಷ ಪವಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಸವಕಲ್ಯಾಣ ಸಮೀಪದ ಪ್ರತಾಪುರ ಗ್ರಾಮದ ನಿವಾಸಿಯಾದ ಸಂತೋಷ್ ಕೂಡ ಬಸವಕಲ್ಯಾಣ ನಗರಸಭೆ ಪೌರ ಕಾರ್ಮಿಕನಾಗಿದ್ದಾನೆ.

ಮಾರ್ಚ್ 29 ರಂದು ರಾತ್ರಿ ಬಸವಕಲ್ಯಾಣ ನಗರದ ಶಹಾ ಹುಸೇನ ಓಣಿಯಲ್ಲಿನ ಬಾಡಿಗೆ ಮನೆಯಲ್ಲಿ ರೇಷ್ಮಾ ಮಲಗಿದ್ದ ವೇಳೆ ಕೊಲೆ ನಡೆದಿತ್ತು. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದರು.

Advertisements

ಆರೋಪಿ ಮತ್ತು ಮೃತಳ ಮಧ್ಯೆ ಅನೈತಿಕ ಸಂಬಂಧವಿತ್ತು. ಆಕೆ ಮದುವೆಗಾಗಿ ಆಗಾಗ ಒತ್ತಾಯಿಸುತ್ತಿದ್ದಳು. ಆದರೂ ಈತ ನಿರಾಕರಿಸಿದ್ದಾನೆ. ಶನಿವಾರ ರಾತ್ರಿ ಆಕೆಯ ಕೊಠಡಿಗೆ ಹೋಗಿದ್ದ ಈತ ಈ ಸಂಬಂಧ ಜಗಳ ನಡೆದಾಗ ಮೊಬೈಲ್ ಚಾರ್ಜರ್ ನ ವೈರ್ ನಿಂದ ಆಕೆಯ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಳ ತಾಯಿ ನೀಡಿದ್ದ ದೂರಿನಲ್ಲಿ ಬಂಧಿತ ಆರೋಪಿ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರಿಂದ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X