ವಿಜಯನಗರ | ಬಸ್‌ನಲ್ಲಿ ಅತ್ಯಾಚಾರಕ್ಕೆ ಯತ್ನ; ಮೂವರ ಬಂಧನ

Date:

Advertisements

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಜಾತ್ರೆಗೆ ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ಮಂಗಳವಾರ ರಾತ್ರಿ ಖಾಸಗಿ ಬಸ್‌ನಲ್ಲಿ ಮರಳುತ್ತಿದ್ದ ವೇಳೆ ಅತ್ಯಾಚಾರದ ಯತ್ನ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಅರಸೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಟ್ಟೂರು ತಾಲೂಕು ಅಲಬೂರಿನ ಚಾಲಕ ಪ್ರಕಾಶ ಮಡಿವಾಳ, ಡಗ್ಗಿ ಬಸಾಪುರ ಗ್ರಾಮದ ರಾಜಶೇಖರ ಮತ್ತು ಅರಸೀಕೆರೆಯ ಬಾರಿಕರ ಸುರೇಶ್ ಬಂಧಿತ ಆರೋಪಿಗಳು.

ಇದನ್ನೂ ಓದಿ: ವಿಜಯನಗರ | ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಶೇ.30ರಷ್ಟು ಅನುದಾನ ಮೀಸಲಿಡಲು ಎಸ್‌ಎಫ್‌ಐ ಆಗ್ರಹ

Advertisements

ದಾವಣಗೆರೆ ಮೂಲದ ಸಂತ್ರಸ್ತ ಮಹಿಳೆ ‘ಮಂಜುನಾಥ’ ಹೆಸರಿನ ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದರು. ಆರೋಪಿ ಚಾಲಕ, ಚೆನ್ನಾಪುರ ಗ್ರಾಮದ ರಸ್ತೆಯಲ್ಲಿ ಬಸ್ ನಿಲ್ಲಿಸಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ರಾಜಶೇಖರ ಮತ್ತು ಸುರೇಶ ಸಹಕರಿಸಿದರು. ಮಹಿಳೆ ಹಾಗೂ ಮಕ್ಕಳು ಚೀರಾಡುವುದನ್ನು ಕೇಳಿಸಿಕೊಂಡ ಬೈಕ್ ಸವಾರರು ಬಸ್ ಒಳಗೆ ಪ್ರವೇಶಿಸಿದಾಗ, ಮಹಿಳೆ ಸ್ಥಿತಿ ಕಂಡು ಮಾಹಿತಿ ನೀಡಿದರು. ಅದರಂತೆ ಬಸ್ ಜಪ್ತಿ ಮಾಡಿ, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ʼಅತ್ಯಾಚಾರʼ, ʼಲೈಂಗಿಕ ದೌರ್ಜನ್ಯʼಗಳಂತಹ ಶಬ್ಧಗಳು ಇತ್ತೀಚೆಗಂತೂ ಸರ್ವೇ ಸಾಮಾನ್ಯವಾಗಿ ಬಳಕೆಯಲ್ಲಿರುವುದು ಕರ್ಣ ಕಠೋರ. ಭೋಗಕ್ಕೆ ಇಂತಹ ಅಮಾನವೀಯ ಕೃತ್ಯವನ್ನೆಸಗಲು ಒಬ್ಬ ವ್ಯಕ್ತಿಯನ್ನು ಪ್ರಚೋದಿಸುವುದಾದರೂ ಏನು? ಎನ್ನುವುದರ ಬಗೆಗೆ ಸ್ಪಷ್ಟ ಉತ್ತರವಿಲ್ಲ. ನೈತಿಕ ಶಿಕ್ಷಣದ ಕೊರತೆ, ವ್ಯವಸ್ಥೆಯಲ್ಲಿ ತಪ್ಪಿತಸ್ಥರು ನಾಜೂಕಾಗಿ ನುಣುಚಿಕೊಳ್ಳಲು ಅವಕಾಶವಿರುವುದೂ ಇದ್ದಿರಬಹುದು. ಹಾಗಾದರೆ ಬದಲಾವಣೆ ಮೊದಲಾಗುವುದು ಯಾವಾಗ?

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X