ಬಿಜೆಪಿ- ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು: ಡಿ ಕೆ ಶಿವಕುಮಾರ್

Date:

Advertisements

ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿಲ್ಲ? ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಕಿದರು.

ದೆಹಲಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳು ಬೆಲೆಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, “ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ?”ಎಂದು ಕುಟುಕಿದರು.

ಗ್ಯಾರಂಟಿ ವೆಚ್ಚ ಹೊರೆಯಾಗುತ್ತಿರುವ ಕಾರಣಕ್ಕೆ ಬೆಲೆ ಹೆಚ್ಚಳ ಮಾಡುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಅವರುಗಳು ಮಾತನಾಡ ಬೇಕಲ್ಲ ಎಂದು ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ” ಎಂದು ಹೇಳಿದರು.

Advertisements

ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ

ಮುಖ್ಯಮಂತ್ರಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ‌ಮಾಡಿದ್ದರ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು ಅದಕ್ಕೆ ಬೇಟಿ ಮಾಡಿದ್ದಾರೆ. ನಾನು ಕೂಡ ಬಂದಾಗ ‌ಭೇಟಿ ಮಾಡಿದ್ದೇನೆ. ಹಲವಾರು ನಾಯಕರನ್ನು ಭೇಟಿಯಾಗುತ್ತೇವೆ. ಕಾಂಗ್ರೆಸ್ ಕಚೇರಿ ಪಕ್ಷದ ದೇವಸ್ಥಾನವಿದ್ದಂತೆ ಭೇಟಿ ಮಾಡಿದರೆ ತಪ್ಪೇನಿದೆ?. ವಿಧಾನ ಪರಿಷತ್ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ” ಎಂದರು.

“ದೆಹಲಿಯ ನೂತನ ಕರ್ನಾಟಕ ಭವನ ನಮ್ಮ ರಾಜ್ಯದ ಜನತೆಯ ರಾಯಭಾರಿಯಾಗಿ ಕೆಲಸ ಮಾಡಲಿದೆ. ಅಂದರೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಸೇರಿದಂತೆ ಅನೇಕರಿಗೆ ಈ ಭವನ ಉಪಯೋಗವಾಗಲಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ರಾಜ್ಯಕ್ಕೆ ಉಪಯೋಗವಾಗಲಿ ಎಂದು ಆಶಿಸುತ್ತೇನೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಸೂಚನೆಗಳನ್ನು ಕಾರ್ಯಗತಗೊಳಿಸಲಾಗುವುದು, ಇದರ ಬಗ್ಗೆ ಮುಖ್ಯಮಂತ್ರಿಗಳು ಸಹ ಸಹಮತ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X