ಸಿದ್ದರಾಮಯ್ಯ-ಡಿಕೆಶಿ ಪರಸ್ಪರ ಹೊಡೆದಾಡಿಕೊಳ್ಳುವ ಕಾಲ ದೂರವಿಲ್ಲ: ಯತ್ನಾಳ್‌

Date:

Advertisements

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಪರಸ್ಪರ ಬಡಿದಾಡಿಕೊಳ್ಳುವ ದಿನಗಳು ದೂರವಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಯತ್ನಾಳ್, “ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯದ ಭೇಟಿ ಅಂತಾರೆ. ಇವರು ಸೌಜನ್ಯದ ಭೇಟಿ ಕೊಡುತ್ತಿಲ್ಲ. ಅದು ಸೋನಿಯಾ ಗಾಂಧಿ ಹೆದರಿಸುವ ಕೆಲಸ. ಬಸವರಾಜ ಬೊಮ್ಮಾಯಿಯವರೇ ಮನೆವರೆಗೂ ಅವರನ್ನು ಬಿಟ್ಟುಕೊಳ್ಳಬೇಡಿ” ಎಂದು ಸಲಹೆ ನೀಡಿದರು.

“ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ ಮೂರು ತಿಂಗಳಲ್ಲಿ ಕಾಂಗ್ರೆಸ್​ ಗ್ಯಾರಂಟಿ ಬಣ್ಣ ಬಯಲಾಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ” ಎಂದು ಕಿಡಿ ಕಾರಿದರು.

Advertisements

“ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲವೆ ಚುನಾವಣೆ ಮುಗಿದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ-ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಡವರು ಕಾಂಗ್ರೆಸ್‌ಗೆ ಮತ ಚಲಾಯಿಸಿದ ಕಾರಣಕ್ಕೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ: ಜೈರಾಮ್‌ ರಮೇಶ್

“ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಎಂದು ಹೇಳಿ. ಅವರನ್ನು ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ. ಹಲ್ಕಟಗಿರಿ ಮಾಡುವುದಿದ್ರೆ ಬಿಟ್ಟು ಹೋಗಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X