ರಾಯಚೂರು | ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪಾದಯಾತ್ರೆ

Date:

Advertisements

ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 15 ರವರಗೆ ನೀರು ಹರಿಸಲು ಸರಕಾರ ಮುಂದಾಗಬೇಕೆಂದು ಒತ್ತಾಯಿಸಿ ಗಬ್ಬೂರು ಪಟ್ಟಣದಿಂದ ರಾಯಚೂರು ಜಿಲ್ಲಾ ಕೇಂದ್ರದವರಗೆ ನಡೆದ ಎರಡನೇ ದಿನದ ಪಾದಯಾತ್ರೆಯಲ್ಲಿ ನೂರಾರು ರೈತರು ಭಾಗವಹಿಸಿ ಪ್ರತಿಭಟಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ, “ಮಾ.14 ರಂದು ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಏ.1ರಿಂದ 6 ರವರೆಗೆ ನೀರು ಹರಿಸುವುದಾಗಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ಅಧಿಕಾರಿಗಳೇ ಸೇರಿಕೊಂಡು ಶಾಸಕರ ಗಮನಕ್ಕೆ ತರದೇ ಒಂದೆರಡು ದಿನ ನೀರು ಹರಿಸಿ ಏಕಾಏಕಿ ಬಂದ್ ಮಾಡಿದ್ದಾರೆ. ನೀರು ಹರಿಸದೇ ಇದ್ದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಕೂಡಲೇ ನಿರ್ಧಾರ ಬದಲಿಸಿ ಕಾಲುವೆಗೆ ನೀರು ಹರಿಸಬೇಕು” ಎಂದು ಆಗ್ರಹಿಸಿದರು.

“ದೇವೇಗೌಡರು ಈ ಭಾಗದ ರೈತರಿಗೆ ಅನುಕೂಲವಾಗಲೆಂದು ನೀರಾವರಿ ಯೋಜನೆಯನ್ನು ಜಾರಿಗೊಳಿಸಿದ್ದರು. ಇದೀಗ ಅದೆ ನೀರಾವರಿ ಯೋಜನೆಯ ಅಧಿಕಾರಿಗಳು ನೀರು ಕೊಟ್ಟರೆ ಸಾಕಾಗಿದೆ. ಕಡ್ಡಾಯವಾಗಿ ನಾಲೆಗೆ ನೀರು ಹರಿಸುವಂತೆ 30 ಕಿ.ಮೀ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ಯಾವ ಅಧಿಕಾರಿಯೂ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿಲ್ಲ. ಇವರ ನಿರ್ಲಕ್ಷಕ್ಕೆ ಸಮಸ್ಯೆ ಎದುರಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಲಾಕಪ್‌ ಡೆತ್ ಪ್ರಕರಣ; ಸಿಪಿಐ, ಪಿಎಸ್ಐ ಅಮಾನತು

Advertisements

ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಪಾಟೀಲ್ ಅತ್ತನೂರು, ಎನ್.ಶಿವಶಂಕರ, ಸಣ್ಣ ನರಸಿಂಹ ನಾಯಕ, ಗಾಣದಾಳ, ರಾಮಕೃಷ್ಣ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X