ಕೊಪ್ಪಳ | ಸೇವಾ ನೂನ್ಯತೆ; ಓಲಾ ಎಲೆಕ್ಟ್ರಿಕ್ ವಾಹನ ಕಂಪನಿಗೆ ದಂಡ

Date:

Advertisements

ಓಲಾ ಎಲೆಕ್ಟ್ರಿಕ್ ವಾಹನ ಮಾರಾಟಗಾರರು ಗ್ರಾಹಕರಿಗೆ ಸೇವಾ ನ್ಯೂನತೆ ಎಸಗಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿ ಆದೇಶಿಸಿದೆ.

ಗಂಗಾವತಿಯ ಶ್ರೀಕಾಂತ ಬಸವನಗೌಡ ರಾಯಚೂರಿನ ಓಲಾ ಎಲೆಕ್ಟ್ರಿಕ್ ವಾಹನ ಮಾರಾಟಗಾರರಿಂದ ಓಲಾ ಎಲೆಕ್ಟ್ರಿಕ್‌ ವಾಹನ ಖರೀದಿಸಿದ್ದಾರೆ. ಖರೀದಿ ಸಲುವಾಗಿ 2024ರ ಜೂ. 23ರಂದು ರೂ. 19,499ಗಳ ಮುಂಗಡ ಪಾವತಿ ಮಾಡಿದ್ದಾರೆ. ಐಡಿಎಫ್‌ಸಿ ಬ್ಯಾಂಕಿನಲ್ಲಿ 85,000 ರೂಗಳ ಸಾಲ ಪಡೆದು, ವಾಹನ ಕಾಯ್ದಿರಿಸಲು ರೂ. 2000 ಹಾಗೂ ನೋಂದಣಿಗಾಗಿ ರೂ. 8519 ಸೇರಿ ಒಟ್ಟು ರೂ. 30,018 ಗಳನ್ನು ಪಾವತಿಸಿದ್ದಾರೆ. ವಾಹನಕ್ಕೆ ವಿಮೆ ಮಾಡಿಸುವ ಸಲುವಾಗಿ ಕಂಪನಿ ಮತ್ತೆ ರೂ. 6,232 ಗಳನ್ನು ಪೆಡೆದುಕೊಂಡಿದ್ದಾರೆ. ಬಳಿಕ ಜು.26ರಂದು ವಾಹನ ಸಂಖ್ಯೆ ಕೆ.ಎ.37/ಇ.ಎಸ್-2399 ನೋಂದಣಿಯಾದ ಬಗ್ಗೆ ಕಂಪನಿ ತಿಳಿಸಿದೆ. ಆದರೆ ವಾಹನ ನೀಡಿಲ್ಲ.

ಈ ಸಂಬಂಧ ಶ್ರೀಕಾಂತ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಆಯೋಗ ಎದುರುದಾರರಿಗೆ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ. ಇನ್ನಿಬ್ಬರು ಎದುರುದಾರರು ವಕೀಲರ ಮೂಲಕವೇ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವನ್ನೂ ಪರಿಶೀಲಿಸಿದ ಆಯೋಗದ ಅಧ್ಯಕ್ಷೆ ಜಿ.ಇ.ಸೌಭಾಗ್ಯಲಕ್ಷ್ಮೀ ಹಾಗೂ ಸದಸ್ಯ ರಾಜು.ಎನ್.ಮೇತ್ರಿ, ಎದುರುದಾರರು ಅನುಚಿತ ವ್ಯಾಪಾರ ಪದ್ಧತಿ ಅನುಸರಿಸಿರುವುದು ಹಾಗೂ ಸೇವಾ ನಿರ್ಲಕ್ಷ್ಯ ಎಸಗಿರುವುದು ಸಾಬೀತಾಗಿದೆ ಎಂದು ಪರಿಗಣಿಸುತ್ತಾ, ಎದುರುದಾರರಿಂದ ಉಂಟಾದ ಸೇವಾ ನ್ಯೂನತೆಗಾಗಿ ಹಾಗೂ ಅನುಚಿತ ವ್ಯಾಪಾರ ಪದ್ಧತಿಗಾಗಿ ಎದುರುದಾರರು ದೂರುದಾರರಿಂದ ಪಡೆದುಕೊಂಡ ವಾಹನ ಖರೀದಿ ಮೊತ್ತ ರೂ. 1,10,680 ಗಳನ್ನು ದೂರಿನ ದಿನಾಂಕದಿಂದ ಪಾವತಿಯಾಗುವವರೆಗೆ ವಾರ್ಷಿಕ ಶೇ. 6ರ ಬಡ್ಡಿ ಸಹಿತ ಹಾಗೂ ಮಾನಸಿಕ ಯಾತನೆಗಾಗಿ ರೂ.10,000 ಹಾಗೂ ದೂರಿನ ಖರ್ಚು ರೂ. 5,000 ಗಳನ್ನು ಪಾವತಿಸಲು ಆದೇಶಿಸಿದ್ದಾರೆ.

Advertisements

ಇದನ್ನೂ ಓದಿ: ಕೊಪ್ಪಳ | ಮುಕ್ತ ವ್ಯಾಪಾರ ಒಪ್ಪಂದ; ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ವಿರೋಧ

ವಾಹನಕ್ಕೆ ಸಂಬಂಧಿಸಿದ ಆರ್.ಸಿ. ಮತ್ತು ಮಾಲಿಕತ್ವ ವರ್ಗಾವಣೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ಎದುರುದಾರರು ದೂರುದಾರರಿಗೆ ಪಾವತಿಸುವಂತೆ ಸೂಚನೆ ನೀಡಿದ್ದಾರೆ.

WhatsApp Image 2025 05 16 at 6.54.26 PM
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X