ಬೀದರ್ ಲೋಕಸಭಾ ಕ್ಷೇತ್ರಕ್ಕೆ 50 ಸಾವಿರ ಹೆಚ್ಚುವರಿ ಮನೆ ಮಂಜೂರು ಮಾಡಿ : ಸಂಸದ ಸಾಗರ್ ಖಂಡ್ರೆ

Date:

Advertisements

ಬೀದರ್ ಲೋಕಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತವನ್ನಾಗಿಸುವ ಆಶಯ ಹೊಂದಿದ್ದು, ಹೆಚ್ಚುವರಿಯಾಗಿ 50 ಸಾವಿರ ಮನೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಸಾಗರ ಖಂಡ್ರೆ ಒತ್ತಾಯಿಸಿದ್ದಾರೆ.

ಸಂಸತ್ ಕಲಾಪದಲ್ಲಿ ಗುರುವಾರ ಗಮನ ಸೆಳೆದ ಅವರು, ‘ಕಳೆದ 5 ವರ್ಷದ ಅವಧಿಯಲ್ಲಿ 5 ಸಾವಿರಕ್ಕಿಂತ ಕಡಿಮೆ ಮನೆ ಮಂಜೂರು ಆಗಿದ್ದವು. ಆದರೆ ನಾನು ಸಂಸದನಾಗಿ ಆಯ್ಕೆಯಾದ ಮೇಲೆ ಕೇವಲ 1ವರ್ಷದ ಅವಧಿಯಲ್ಲಿ ಪಿಎಂಎವೈ (ಗ್ರಾಮೀಣ) ಯೋಜನೆಯಡಿ ಸುಮಾರು 50 ಸಾವಿರ ಮನೆಗಳನ್ನು ಮಂಜೂರಾತಿ ಮಾಡಿಸಿದ್ದೇನೆ’ ಎಂದರು.

ಅನುಮೋದಿತ ಮನೆಗಳಿಗೆ ಇದುವರೆಗೂ ಕೇವಲ ಶೇ.35ರಷ್ಟು ಮಂಜೂರಾತಿ ದೊರೆತಿದೆ. ಜತೆಗೆ ಮನೆಗಳ ಸರ್ವೇ ಅವಧಿಯನ್ನು ಮಾ.31ಕ್ಕೆ ಪೂರ್ಣಗೊಂಡಿದೆ. ಹಾಗಾಗಿ ಈ ಅವಧಿಯನ್ನು ವಿಸ್ತರಿಸುವುದರ ಜತೆಗೆ ನನ್ನ ಕ್ಷೇತ್ರಕ್ಕೆ ಹೆಚ್ಚುವರಿ ಇನ್ನೂ 50 ಸಾವಿರ ಮನೆಗಳನ್ನು ಮಂಜೂರು ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

Download Eedina App Android / iOS

X