ಗುಬ್ಬಿ | ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!.

Date:

Advertisements

ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಆದಲಗೆರೆ ಗ್ರಾಮದಲ್ಲಿ ವಾಸವಾಗಿದ್ದ ಮಹದೇವಯ್ಯ ಎಂಬುವರ ಹೆಂಡತಿಯಾದ ವಿಜಯಲಕ್ಷ್ಮಿ(45) ತನ್ನ ಮಗಳು ಚೂಡಾಮಣಿ(18),
ಹಾಗೂ ನರಸಿಂಹಮೂರ್ತಿ(14) ಎಂಬ ಮಗನೊಂದಿಗೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ 6 ಗಂಟೆ ಸಮಯದಲ್ಲಿ ಅವರ ಸ್ವಗೃಹದಲ್ಲಿ ನಡೆದಿದೆ.

ಅಂಗ ವೈಪಲ್ಯತೆಯಿಂದ ಬಳಲುತ್ತಿದ್ದ ತನ್ನ ಇಬ್ಬರು ಮಕ್ಕಳ ಜೊತೆಗೆ ಇತ್ತೀಚೆಗೆ ತಾಯಿಯ ಆರೋಗ್ಯದಲ್ಲಿ ಏರು ಪೇರು ಆಗುತ್ತಿದ್ದು, ತನ್ನ ಗಂಡ ಮನೆಯಲ್ಲಿ ಇಲ್ಲದ ಸಮಯದಲ್ಲಿ ಅನಾರೋಗ್ಯದ ಕಾರಣದಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಪೊಲೀಸ್. ಮೂಲಗಳು ತಿಳಿಸಿವೆ.

Advertisements

ಚಿಲ್ಲರೆ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಮೃತ ಮಹಿಳೆಯ ಪತಿ ಮಹದೇವಯ್ಯ ಅಂಗಡಿಗೆ ಬೇಕಾದ ದಿನಸಿ ಸಾಮಗ್ರಿ ತರಲು ತುಮಕೂರಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಗಂಡ ಮನೆಗೆ ಬಂದು ನೋಡಲಾಗಿ ವಿಚಾರ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಈಗಾಗಲೇ ಚೇಳೂರು ಪೊಲೀಸರು ಮೊಕಂ ಹೂಡಿದ್ದು ನಡೆದಿರುವ ತಾಯಿ ಮಕ್ಕಳ ಸಾವಿಗೆ ನಿಖರ ಕಾರಣದ ಪತ್ತೆಗೆ ಮುಂದಾಗಿ ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಸ್ಥಳಕ್ಕೆ ಸಿಪಿಐ ರಾಘವೇಂದ್ರ ಭೇಟಿ ನೋಡಿ ಸೂಕ್ಷ್ಮ ವಿಚಾರ ಆಲಿಸಿ ತನಿಖೆಗೆ ತಂಡ ರಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X