ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಿಗೆ 123 ದಿನ ರಜೆ

Date:

Advertisements

2025-26ನೇ ಸಾಲಿನ ಶೈಕ್ಷಣಿಕ ವರ್ಷವು ಮೇ 29ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿನ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಅದರಂತೆ, 2025-26ನೇ ಸಾಲಿನಲ್ಲಿ ಬರೋಬ್ಬರಿ 123 ರಜಾ ದಿನಗಳು ಇರಲಿವೆ ಎಂದು ತಿಳಿಸಿದೆ.

ಶಿಕ್ಷಣ ಇಲಾಖೆಯು ರಜಾ ದಿನಗಳ ಕುರಿತು ಪ್ರಕರಣೆ ಬಿಡುಗಡೆ ಮಾಡಿದೆ. “ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿಗಳು ಮತ್ತು ರಜಾ ಅವಧಿಗಳು ಅನ್ವಯವಾಗಲಿದೆ” ಎಂದು ಹೇಳಿದೆ.

ಮುಂದಿನ ಶಿಕ್ಷಣಿಕ ವರ್ಷವು ಎಂದಿನಂತೆ 2025 ಮೇ 29ರಿಂದ ಆರಂಭವಾಲಿದೆ. ಈ ವರ್ಷದಲ್ಲಿ ಎಲ್ಲ ಶಾಲೆಗಳಲ್ಲಿಯೂ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಕಾರ್ಯಸೂಚಿಯನ್ನು ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.

Advertisements

2025-26ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು
ಮೊದಲನೇ ಅವಧಿ: 2025ರ ಮೇ 29ರಿಂದ ಸೆಪ್ಟೆಂಬರ್​ 19 ರವರೆಗೆ
ಎರಡನೇ ಅವಧಿ: 2025ರ ಅಕ್ಟೋಬರ್​ 08ರಿಂದ 2026 ಏಪ್ರಿಲ್​ 10ರವರೆಗೆ

ಪ್ರಮುಖ ರಜಾ ದಿನಗಳು
ದಸರಾ ರಜೆ: 2025ರ ಸೆಪ್ಟೆಂಬರ್​ 20ರಿಂದ ಅಕ್ಟೋಬರ್​​ 07 ರವರೆಗೆ – ಒಟ್ಟು 18 ದಿನಗಳು
ಬೇಸಿಗೆ ರಜೆ: 2026ರ ಏಪ್ರಿಲ್​​ 11ರಿಂದ ಮೇ​ 28ರವರೆಗೆ – ಒಟ್ಟು 48 ದಿನಗಳು

ಬೇಸಿಗೆ ಮತ್ತು ದಸರಾ ರಜೆಗಳು ಒಟ್ಟು 66 ದಿನಗಳ ಇರಲಿವೆ. ಈ ರಜೆಗಳ ಜೊತೆಗೆ ಭಾನುವಾರಗಳು, ರಾಷ್ಟ್ರೀಯ ರಜಾ ದಿನಗಳು, ಪ್ರಮುಖ ಹಬ್ಬಗಳು ಸೇರಿದಂತೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ 123 ರಜೆಗಳು ಇರಲಿವೆ.

ಉಳಿದಂತೆ, 242 ಶೈಕ್ಷಣಿಕ ಚಟುವಟಿಕೆಯ ದಿನಗಳು ಇರಲಿವೆ. ಅದರಲ್ಲಿಯೂ 4 ದಿನ ಸ್ಥಳೀಯ ರಜೆಗಳನ್ನು ನೀಡಲು ಅವಕಾಶ ಇರುತ್ತದೆ. ಅಲ್ಲದೆ, ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕೆ 26 ದಿನಗಳು, ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳನ್ನು ಮೀಸಲಿಡಲಾಗಿದೆ. ಹೀಗಾಗಿ, ಬೋಧನಾ ಕಲಿಕಾ ಪ್ರಕ್ರಿಯೆಗೆ 178 ದಿನಗಳು ಮಾತ್ರವೇ ಉಳಿಯಲಿವೆ ಎಂದು ಇಲಾಖೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X