ಉಡುಪಿ | ನಾಗರಿಕ ಸಮಿತಿಯ ನೇತ್ರತ್ವದಲ್ಲಿ ಅಪರಿಚಿತ ಶವದ ದಫನ

Date:

Advertisements

ಉಡುಪಿ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಘಟಕದಲ್ಲಿ ಕೆಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ಕಾನೂನು ಪ್ರಕ್ರಿಯೆಗಳು ನಡೆದಾದ ಬಳಿಕ ಬೀಡಿನಗುಡ್ಡೆಯ ದಫನಭೂಮಿಯಲ್ಲಿ ಗೌರವಯುತವಾಗಿ ಗುರುವಾರ ನಡೆಸಲಾಯಿತು.

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿತ್ತು. ಮಲ್ಪೆ‌ ಪೋಲಿಸರು ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಟ್ಟಿದ್ದರು. ವಾರಸುದಾರರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು, ವಾರಸುದಾರರ ಕಾಯುವಿಕೆ ಕಾಲಮಿತಿ ಕಳೆದಿರುವುದರಿಂದ, ಮಲ್ಪೆ ಪೋಲಿಸರು ಮತ್ತು ಸಮಾಜ ಸೇವಕ ನಿತ್ಯಾನಂದ ಒಳಕಾಡು ನೇತ್ರತ್ವದಲ್ಲಿ ದಪನ ಮಾಡಲಾಯಿತು.

ಮಲ್ಪೆ ಪೋಲಿಸ್ ಠಾಣೆಯ ಹೆಡ್ ಕಾನ್ಸಟೇಬಲ್ ಭಾಸ್ಕರ್, ನಾಗರಾಜ್ ಕಾನೂನು ಪ್ರಕ್ರಿಯೆ ನಡೆಸಿದರು. ಮರಣೋತ್ತರ ಪರೀಕ್ಷಾ ತಜ್ಞ ಡಾ. ರಮೇಶ್ ಕುಂದರ್ ಮರಣೋತ್ತರ ಪರೀಕ್ಷೆ ನಡೆಸಿದರು. ನಾಗರಿಕ ಸಮಿತಿಯ ಕಾರ್ಯಕರ್ತರಾದ ಸತೀಶ್ ಕುಮಾರ್, ಹರೀಶ್ ಪೂಜಾರಿ, ಜಗದೀಶ್, ಯತೀಶ್ ಕುಮಾರ್ ಕಡಿಯಾಳಿ ಅಂತ್ಯಸಂಸ್ಕಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಫ್ಲವರ್ ವಿಷ್ಣು, ನಗರಸಭೆ‌ ಸಹಕರಿಸಿತು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X