ಏಕದಿನ ವಿಶ್ವಕಪ್‌ 2023 | ಆಗಸ್ಟ್‌ 29 ʻಡೆಡ್‌ಲೈನ್‌ʼ ನಿಗದಿಪಡಿಸಿದ ಐಸಿಸಿ

Date:

Advertisements

ಐಸಿಸಿ ಏಕದಿನ ವಿಶ್ವಕಪ್‌ 2023 ಟೂರ್ನಿಯು ಅಕ್ಟೋಬರ್‌-ನವೆಂಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿದೆ.

ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ನ್ಯೂಜಿಲೆಂಡ್, ಹಾಗೂ ಆತಿಥೇಯ ಭಾರತ ಸೇರಿದಂತೆ ಒಟ್ಟು 7 ತಂಡಗಳು ಈಗಾಗಲೇ ಟೂರ್ನಿಗೆ ಅರ್ಹತೆ ಪಡೆದಿವೆ. ಉಳಿದ 3 ಸ್ಥಾನಗಳಿಗಾಗಿ 15 ತಂಡಗಳ ನಡುವೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ.

 ಈ ನಡುವೆ ಮಹತ್ವದ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳುವ ತಂಡಗಳಿಗೆ, ತಮ್ಮ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಗಸ್ಟ್ 29ರ ಗಡುವನ್ನು ನಿಗದಿಪಡಿಸಿದೆ.

Advertisements

ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯು ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ಹೀಗಾಗಿ ತಂಡವನ್ನು ಅಂತಿಮಗೊಳಿಸಲು 2 ತಿಂಗಳುಗಳ ಅವಧಿ ಬಾಕಿಯಿದೆ. ಆದರೆ ಐಸಿಸಿಗೆ ಸಲ್ಲಿಸಲಾಗುವ ಪಟ್ಟಿಯಲ್ಲಿ, ಪಂದ್ಯಾವಳಿ ಪ್ರಾರಂಭವಾಗುವ ಒಂದು ವಾರ ಮುಂಚಿತವಾಗಿ ಬದಲಾವಣೆ ಮಾಡಿಕೊಳ್ಳಲು, ಅವಕಾಶವಿರುತ್ತದೆ. ಇದಾದ ಬಳಿಕ ಆಟಗಾರರ ಬದಲಾವಣೆಗೆ  ಐಸಿಸಿ ತಾಂತ್ರಿಕ ಸಮಿತಿಯ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಈ ಸುದ್ದಿ ಓದಿದ್ದೀರಾ?: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ; ಐಪಿಎಲ್‌ ಸ್ಟಾರ್‌ ಆಟಗಾರರಿಗೆ ಸ್ಥಾನ

ಬಿಸಿಸಿಐಗೆ ತಲೆನೋವು!

ಐಸಿಸಿ ವಿಧಿಸಿರುವ ʻಡೆಡ್‌ಲೈನ್‌ʼ ಬಿಸಿಸಿಐ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಫೆಬ್ರವರಿಯಲ್ಲಿ ಚೇತನ್‌ ಶರ್ಮಾ ರಾಜೀನಾಮೆ ನೀಡಿದ ಬಳಿಕ ಹಿರಿಯರ ಆಯ್ಕೆ ಸಮಿತಿಯು ʻಅಧ್ಯಕ್ಷʼರಿಲ್ಲದೆ ಕಾರ್ಯ ನಿರ್ವಹಿಸುತ್ತಿದೆ. ವಿಶ್ವಕಪ್‌ಗೂ ಮುನ್ನ ಭಾರತ ತಂಡ ವೆಸ್ಟ್‌ ಇಂಡೀಸ್‌, ಏಷ್ಯಾ ಕಪ್‌ ಮತ್ತು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.

ಚೇತನ್ ಶರ್ಮಾ ರಾಜೀನಾಮೆ ನೀಡಿ ಅದಾಗಲೇ ಐದು ತಿಂಗಳು ಕಳೆದಿದೆ. ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ, ಶ್ರೀಧರನ್ ಶರತ್ ಸದ್ಯಸರಾಗಿರುವ ಆಯ್ಕೆ ಸಮಿತಿಯಲ್ಲಿ ಶಿವಸುಂದರ್ ದಾಸ್ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಸಿಸಿಐ ಹಿರಿಯರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು, ಕನಿಷ್ಠ 24 ಟೆಸ್ಟ್‌ ಪಂದ್ಯಗಳನ್ನಾಡಿದ ಅನುಭವ ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಸದ್ಯ ಸಮಿತಿಯಲ್ಲಿರುವವರು ಈ ಅರ್ಹತೆಯನ್ನು ಹೊಂದಿಲ್ಲ. ಹೀಗಾಗಿ ನೂತನ ಅಧ್ಯಕ್ಷರ ನೇಮಕವಾಗಬೇಕಿದೆ. ಆದರೆ ಅನುಭವಿ, ಖ್ಯಾತ ಮಾಜಿ ಆಟಗಾರರು ಯಾರೂ ಸಹ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಉತ್ಸಾಹ ತೋರುತ್ತಿಲ್ಲ. ಇದು ಬಿಸಿಸಿಐಗೆ ಸಂಕಷ್ಟ ತಂದಿಟ್ಟಿದೆ.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X