ಶಿವಮೊಗ್ಗ | ಕಾನೂನು ತಿಳಿವಳಿಕೆ ಸುಗಮ ಬದುಕಿಗೆ ದಾರಿ: ನ್ಯಾ. ಸಂತೋಷ್

Date:

Advertisements

ಕಾನೂನಿನ ಸರಿಯಾದ ತಿಳಿವಳಿಕೆಯಿಂದ ನಾಗರಿಕ ಬದುಕು ಸುಗಮ ಹಾಗೂ ಸುಸ್ಥಿರವಾಗಿ ಸಾಗುತ್ತದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್‌ ಎಂ ಎಸ್‌ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ ಕಾಲೇಜು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಇಂದಿನ ಯುವ ಸಮುದಾಯದ ಮುಂದೆ ಹಲವು ಆಕರ್ಷಣೆಗಳಿವೆ. ಮೊಬೈಲ್, ಅಂತರ್ಜಾಲ ಮುಂತಾದವುಗಳ ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸಂಯಮ, ಸಹನೆ, ಸಾಮಾಜಿಕ ಕಾಳಜಿ ಕಡಿಮೆಯಾಗುತ್ತಿದೆ. ಏಕಾಂಗಿತನ ಹೆಚ್ಚಾಗುತ್ತಿದೆ. ಮದ್ಯಪಾನ, ಗಾಂಜಾ ಸೇವನೆಯಿಂದ ಬದುಕನ್ನು ದುರಂತಗೊಳಿಸಿಕೊಳ್ಳುತ್ತಿದ್ದಾರೆ. ಸರಿಯಾದ ತಿಳಿವಳಿಕೆ, ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆಲ್ಲಾ ಕಾನೂನಿನ ಬಗ್ಗೆ ಅರಿವು ಅತ್ಯಗತ್ಯ” ಎಂದರು.

1001430823

ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವ ಶ್ರೀ ಗೋಪಿನಾಥ್ ಎಸ್ ಎಂ, ಡಾ. ಎ ಟಿ ಪದ್ಮೇಗೌಡ, ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ, ಮಾಲತೇಶ್, ದಿವ್ಯ ಪ್ರವೀಣ್, ಎನ್ ಎಸ್ ಎಸ್ ಅಧಿಕಾರಿ ಗಿರಿಧರ್, ಡಾ. ಹಾ ಮ ನಾಗಾರ್ಜುನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪದವಿ ಕಾಲೇಜುಗಳ 150 ಸ್ವಯಂ ಸೇವಕರು ಮತ್ತು ಸ್ವಯಂ ಸೇವಕಿಯರು ಉಪಸ್ಥಿತರಿದ್ದರು.

Advertisements

ಇದನ್ನೂ ಓದಿ: ಶಿವಮೊಗ್ಗ | ಬಿಜೆಪಿಯ ಮುಂದಿನ ಟಾರ್ಗೆಟ್‌ ಸಿಟಿ ರವಿ: ಶಾಸಕ ಬೇಳೂರು ಗೋಪಾಲ್ ಕೃಷ್ಣ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X