ಗದಗ | ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು: ದಾವಲಾಸಾಬ್ ತಾಳಿಕೋಟಿ ಒತ್ತಾಯ

Date:

Advertisements

“ವಕ್ಪ್ ತಿದ್ದುಪಡಿ ಮಸೂದೆ ಜಾರಿಯಿಂದ ಮುಸ್ಲಿಂ ಸಮೂದಾಯಕ್ಕೆ ಮಾರಕವಾಗಲಿದೆ. ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು” ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ನೇತೃತ್ವದಲ್ಲಿ ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ, ಜಾಮೀಯ ಮಸೀದಿಯಿಂದ ಕಪ್ಪು ಪಟ್ಟಿ ಧರಿಸಿ, ಕಾಲ್ನಡಿಗೆ ಮೂಲಕ ಕೆ.ಕೆ.ಸರ್ಕಲ್ ವೃತ್ತದವರೆಗೆ ಮೆರವಣಿಗೆ ನಡೆಸಿ  ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ದೇಶದಲ್ಲಿ ಎಲ್ಲ ಸಮುದಾಯದವರಿಗೂ ಅವರದ್ದೇ ಆದ ಹಬ್ಬ, ಆಚರಣೆ, ಪೂಜೆ, ನಮಾಜ್ ಮಾಡುವ ಧಾರ್ಮಿಕ ಹಕ್ಕನ್ನು ಕಾನೂನಿನಲ್ಲಿ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಸಮಾಜದಲ್ಲಿ ಶಾಂತಿ ಭಂಗ ಮಾಡುವಂತಹ, ಜನ ವಿರೋಧಿ ಕಾನೂನುಗಳನ್ನು ರೂಪಿಸಲು ಮುಂದಾಗಿದೆ’ ಎಂದು ಹೇಳಿದರು.

Advertisements

“ಪ್ರಧಾನಮಂತ್ರಿ ದೇಶದ ಸಂಪತ್ತನ್ನು ಒಂದೊಂದಾಗಿ ಮಾರುತ್ತಿದ್ದಾರೆ. ಈಗ ಮುಸಲ್ಮಾನರ ಸಂಪತ್ತಿನ ಮೇಲೆ ಕಣ್ಣು ಹಾಕಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ವಕ್ಫ್ ಆಸ್ತಿ ಮತ್ತು ದೇಶದ ಭವಿಷ್ಯಕ್ಕೆ ಅಪಾಯವನ್ನುಂಟು ಮಾಡುವ ಹಲವು ತಿದ್ದುಪಡಿಗಳಿದ್ದು, ಕೂಡಲೇ ಈ ಮಸೂದೆಯನ್ನು ಹಿಂಪಡೆಯಬೇಕು”ಎಂದು ಆಗ್ರಹಿಸಿದರು.

ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಚೇರಮನ್ನ ಎ.ಡಿ.ಕೋಲಕಾರ ಮಾತನಾಡಿ, “ಧಾರ್ಮಿಕ ಸ್ವಾತಂತ್ರ್ಯ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿಯಾಗಿದೆ. ವಕ್ಫ್ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಹಾನಿ ಮಾಡುತ್ತದೆ. ಮಸೂದೆಯನ್ನು ಹಿಂಪಡೆಯಲು ರಾಷ್ಟಪತಿಗಳು ಮಧ್ಯಸ್ಥಿಕೆ ವಹಿಸಿ ಕೋಟ್ಯಾಂತರ ಅಲ್ಪಸಂಖ್ಯಾತರ ರಕ್ಷಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಪುರಸಭೆ ಸದಸ್ಯ ರಾಜು ಸಂಗ್ಲೀಕಾರ ಮಾತನಾಡಿ, ವಕ್ಪ್ ತಿದ್ದುಪಡೆ ಮಸೂದೆ ದ್ವೇಷಪೂರಿತ ಕಾನೂನಾಗಿದ್ದು, ಯಾವುದೇ ಕಾರಣಕ್ಕೂ ಮಸೂದೆ ಜಾರಿಗೆ ತರಬಾರದು. ಒಂದು ವೇಳೆ ಜಾರಿಗೆ ತಂದಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಎಲ್ಲ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂತ ಹಂತವಾಗಿ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ

ಪ್ರತಿಭಟನಾ ಮೆರವಣಿಗೆಯಲ್ಲಿ ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ, ಎಸ್.ಎಂ ಆರಗಿದ್ದಿ, ನಾಸೀರ್ ಸುರಪುರ, ಮಾಸುಮಲಿ ಮದಗಾರ,, ದಾದೇಸಾಬ ಹಣಗಿ, ಉಪಾಧ್ಯಕ್ಷ ಹಾಸೀಂ ಹಿರೇಹಾಳ, ಆರೀಫ್ ಮನಿಯಾರ, ಆಸೀಫ್ ಮೋಮಿನ್,  ಭಾಷು ಮುದಗಲ್ಲ, ಇಮ್ರಾನ್ ಅತ್ತಾರ, ಪತ್ತೇಸಾಬ ತಹಶಿಲ್ದಾರ, ಖಾಸಿಂಸಾಬ ಮುಚ್ಚಾಲಿ, ಮೆಹಬೂಬ್ ಮುದಗಲ್ಲ, ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X