ವಿಜಯಪುರ | ʼದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮಶುದ್ಧಿಗೊಳಿಸುತ್ತವೆʼ

Date:

Advertisements

ಕನ್ನಡದ ಮೊದಲ ವಚನಕಾರ ದೇವರ ದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮ ಶುದ್ದಿಗೊಳಿಸುತ್ತವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಎಂ ನಾಗರಾಜ ಹೇಳಿದರು.

ವಿವಿಯಲ್ಲಿ ಆಯೋಜಿಸಿದ್ದ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇವರ ದಾಸಿಮಯ್ಯ ಅವರ ವಚನಗಳು ಸಮಾಜದಲ್ಲಿ ಮಹತ್ವದ ಪರಿವರ್ತನೆಗಳನ್ನು ಉಂಟುಮಾಡುವ ಶಕ್ತಿ ಹೊಂದಿವೆ. ಅವರ ವಚನಗಳಲ್ಲಿ ಶ್ರಮಪೂಜೆ, ಭಕ್ತಿ, ಮಾನವೀಯತೆ ಮತ್ತು ಸಮಾನತೆಯ ಆದರ್ಶಗಳು ಸ್ಪಷ್ಟವಾಗಿ ಪ್ರತಿಫಲಿಸುತ್ತವೆ. ಅವರ ವಚನಗಳು ಕೇವಲ ಭಕ್ತಿಯ ಸಾರವಲ್ಲ, ಅದು ಬದುಕಿನ ನೈತಿಕ ಮೌಲ್ಯಗಳಿಗೂ ದಾರಿದೀಪವಾಗಿದೆ. ಹೊಸ ತಲೆಮಾರಿಗೆ ದಾಸಿಮಯ್ಯನ ವಚನಗಳು ಸೌಹಾರ್ದತೆ, ಸತ್ಕಾರ್ಯ ಮತ್ತು ಮಾನವೀಯತೆಯ ಆಧಾರಶಿಲೆಯಾಗಿ ಕಾರ್ಯನಿರ್ವಹಿಸುತ್ತವೆ” ಎಂದರು.

ವಿವಿಯ ಯುಜಿ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ಸಕಾಲ ಹೂವಣ್ಣ ಮಾತನಾಡಿ, “ದೇವರ ದಾಸಿಮಯ್ಯ ಅವರ ವಚನಗಳು ಇಂದಿಗೂ ಸಮಾಜದ ಸುಧಾರಣೆಗೆ ಪ್ರೇರಣೆಯಾಗಿದ್ದು, ಅವು ಬದುಕಿಗೆ ಮಾರ್ಗದರ್ಶಕ ಬೆಳಕಾಗಿ ಕೆಲಸ ಮಾಡುತ್ತವೆ. ವಿದ್ಯಾರ್ಥಿನಿಯರು ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ಜ್ಞಾಪಿಸಿಕೊಳ್ಳಬೇಕು” ಎಂದರು.

Advertisements

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ಕಾರ್ಯಕ್ರಮದಲ್ಲಿ ವಿಭಾಗದ ಸಂಯೋಜಕಿ ಡಾ. ಜಿ ಸೌಭಾಗ್ಯ, ಡಾ. ಚೆಲುವರಾಜು, ಸಾಂಸ್ಕೃತಿಕ ಸಂಯೋಜಕ ಡಾ. ಮೆಹರಾಜ್ ಹಾಗೂ ಬೋಧಕ , ಬೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X