ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಲಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿದ್ಯಾರ್ಥಿನಿ ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಯಲಿದ್ದ ಹಕ್ಕೊತ್ತಾಯ ಸಭೆ ಮತ್ತು ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ತಡೆ ನೀಡಿದೆ.

ಧನಕೀರ್ತಿ ಆರಿಗ ಎಂಬವರು ಈ ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಂದಿನ ವಿಚಾರಣೆಯವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ತುಳುನಾಡ ಸಂಸ್ಕೃತಿಯಂತೆ ‘ದೈವ’ ಆಗಬೇಕಾಗಿದ್ದ ಸೌಜನ್ಯ ದೇವಿಯಾದಳು; ವೈದಿಕೀಕರಣದ ಹೊಸ ಮಗ್ಗಲು

Advertisements

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪ್ರತಿಭಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಉಲ್ಲೇಖಿಸಿದ್ದಾರೆ. ಧರ್ಮಸ್ಥಳ ದೇವಾಲಯ ಹಾಗೂ ಧರ್ಮಾಧಿಕಾರಿಗಳ ಪರವಾಗಿ ನ್ಯಾಯಾಲಯ ಹೊರಡಿಸಿದ್ದ ಆದೇಶಗಳನ್ನು ಉಲ್ಲಂಘಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ನುಗ್ಗುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.

ವಾದ ಆಲಿಸಿದ ಪೀಠವು ಪ್ರತಿಭಟನೆಗೆ ಮಧ್ಯಂತರ ತಡೆ ನೀಡಿದೆ. ಹಾಗೆಯೇ ಪ್ರತಿಭಟನೆ ಆಯೋಜಕರಿಗೆ ತುರ್ತು ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

ಇದನ್ನು ಓದಿದ್ದೀರಾ? ಸುಳ್ಯ | ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ಸಂತೋಷ್ ನಿರಪರಾಧಿ ಎಂದು ಈಗಾಗಲೇ ಕೋರ್ಟ್ ಘೋಷಿಸಿದೆ. ಈ ಕೊಲೆಯ ನಿಜ ಆರೋಪಿ ಯಾರು ಎಂದು ಆಗ್ರಹಿಸಿ ನಿರಂತರ ಪ್ರತಿಭಟನೆ, ಸಭೆ ನಡೆಸಲಾಗುತ್ತಿದೆ.

ಈ ಹಿಂದೆ ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅರ್ಜಿ ವಿಚಾರಣೆ ನಡೆಸಿದ್ದ ಪೀಠವು ಶಾಂತಿಯುತ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನಿರಾಕರಿಸಲಾಗುವುದಿಲ್ಲ ಎಂದಿತ್ತು. ಆದರೆ ಇದೀಗ ಅರ್ಜಿದಾರರ ಪರ ವಕೀಲರು ಧರ್ಮಸ್ಥಳ ದೇವಸ್ಥಾನಕ್ಕೆ ಒತ್ತಾಯಪೂರ್ವಕವಾಗಿ ನುಗ್ಗುವ ಸಾಧ್ಯತೆಯಿದೆ ಎಂದು ವಾದಿಸಿರುವ ಕಾರಣ ತಾತ್ಕಾಲಿಕ ತಡೆ ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X