ರಾಯಚೂರು | ಮದುವೆ ಮಂಟಪವೇ ಬಾಲವಾಡಿ; ಅಧಿಕಾರಿಗಳಿಗೆ ಬೇಡವಾದ ಚಿಣ್ಣರ ಕೇಂದ್ರ

Date:

Advertisements

ಚಿಣ್ಣರ ಕಲಿಕೆಗೆ ಸುವ್ಯವಸ್ಥಿತವಾಗಿರಬೇಕಾಗಿದ್ದ ಅಂಗನವಾಡಿ ಕೇಂದ್ರವೊಂದು ಶಿಥಿಲಗೊಂಡು ಮಕ್ಕಳಿಗೆ ಮದುವೆ ಮಂಟಪವೇ ಅಂಗನವಾಡಿ ಕೇಂದ್ರವಾಗಿದೆ. ಇಷ್ಟಾದರೂ ತಮಗೆ ಸಂಬಂಧವೇ ಇಲ್ಲದಂತೆ ಸಂಬಂಧಪಟ್ಟ ಅಧಿಕಾರಿಗಳು ವರ್ತಿಸುತ್ತಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ನಾಗರಹಾಳ ಗ್ರಾಮ ವ್ಯಾಪ್ತಿಯ ತುಂಬಲಗಡ್ಡಿ ಗ್ರಾಮದ ಅಂಗನವಾಡಿ ಕಟ್ಟಡ ಸಂಪೂರ್ಣ ದುರಸ್ತಿಗೆ ಬಂದಿದೆ. ಕಟ್ಟಡ್ದ ಛಾವಣಿ ಅಲ್ಲಲ್ಲಿ ದೊಡ್ಡ ಬಿರುಕು ಮೂಡಿ ಪೂರ್ತಿ ಅಧ್ವಾನವಾಗಿದೆ. ಮಳೆ ಬಂದರಂತೂ ಅಂಗನವಾಡಿ ಕಾರ್ಯಕರ್ತೆ ಆತಂಕದಲ್ಲೇ ಮಕ್ಕಳಿಗೆ ಪಾಠ ಹೇಳುವ ಸ್ಥಿತಿ ನಿರ್ಮಾಣವಾಗಿದೆ. ಹಲವು ಬಾರಿ ಇದೇ ಪುನರಾವರ್ತನೆಯಾಗಿ ಬೇಸತ್ತ ಶಿಕ್ಷಕಿ ಗ್ರಾಮದ ಕಲ್ಯಾಣ ಮಂಟಪದ ಮೊರೆ ಹೋಗಿದ್ದಾರೆ.

1000100212

ಗ್ರಾಮದ ನಿವಾಸಿಯೊಬ್ಬರು ಈದಿನ ಡಾಟ್‌ ಕಾಮ್‌ನೊಂದಿಗೆ ಮಾತನಾಡಿ, “ಒಂದೆಡೆ ಅಂಗನವಾಡಿ ನಡೆಸಲು ಕಟ್ಟಡಗಳಿಲ್ಲ ಎಂಬ ಕೂಗಿದ್ದರೆ ಇನ್ನೊಂದೆಡೆ ಕಟ್ಟಡವಿದ್ದರೂ ಅವುಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಸಾಧ್ಯವಾಗುತ್ತಿಲ್ಲ. ಅಂಗನವಾಡಿ ಕಟ್ಟಡ ಸುಮಾರು ವರ್ಷಗಳಿಂದ ದುಸ್ಥಿತಿಯಲ್ಲೇ ಇದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದೆ ತಮಗೆ ಸಂಬಂಧವಿಲ್ಲದಂತೆ ಕಾಲ ಕಳೆಯುತ್ತಿದ್ದಾರೆ” ಎಂದು ಆರೋಪಿಸಿದರು.

ಶಿಥಿಲಗೊಂಡಿರುವ ಕಟ್ಟಡದಲ್ಲಿ ಪಾಠ ಮಾಡಲು ಸಾಧ್ಯವೇ ಇಲ್ಲ. ಪಾಲಕರು ಮಕ್ಕಳನ್ನು ಕೇಂದ್ರಕ್ಕೆ ಕಳಿಸಿ, ಅವರು ಹಿಂತಿರುಗುವವರೆಗೂ ಆತಂಕದಲ್ಲೇ ದಿನ ದೂಡುವಂತಾಗುತ್ತದೆ.

1000100203

ಅಂಗನವಾಡಿ ಕೇಂದ್ರದ ಶಿಕ್ಷಕಿ ಸುರೇಖಾ ಮಾತನಾಡಿ, “ಸುಮಾರು ಎರಡು ವರ್ಷಗಳಿಂದ ಗ್ರಾಮದ ಮದುವೆ ಮಂಟಪವೇ ಮಕ್ಕಳಿಗೆ ಅಂಗನವಾಡಿ ಕೇಂದ್ರವಾಗಿದೆ. ಮದುವೆ ಸಮಾರಂಭಗಳು ಇದ್ದಾಗ ಅಂಗನವಾಡಿ ಕೇಂದ್ರ ರಜೆ ಹೇಳಲಾಗುತ್ತದೆ. ದಿನಸಿ ಸೇರಿ ಇತರೆ ಅಗತ್ಯ ಸಾಮಗ್ರಿಗಳನ್ನು ಆಗಾಗ ಒಂದು ಕಡೆಯಿಂದ ಮತ್ತೊಂದು ಕಡೆಗೆ ವರ್ಗಾಯಿಸುತ್ತಲೇ ಇರಬೇಕು. ಮದುವೆ ಸಮಾರಂಭ ಮುಗಿದಾಗ ಮತ್ತೆ ನಾವು ಅದನ್ನು ಸ್ವಚ್ಛ ಮಾಡಿ ಮಕ್ಕಳನ್ನು ಕರೆತರಬೇಕು. ಸ್ಥಳೀಯ ಜನರಿಗೆ ಕೂಡ ಇದರಿಂದ ಸಮಸ್ಯೆ ಎದುರಾಗಿದೆ ಇದರಿಂದ ಆಗಾಗ ಕಿರಿಕಿರಿ ಉಂಟಾಗುತ್ತಲೇ ಇದೆ” ಎಂದು ಅವಲತ್ತುಕೊಂಡರು.

Advertisements
1000100218

ಮುಂದೆ ಮಳೆಗಾಲ ಸಮೀಪಿಸುತ್ತಿದ್ದು, ಅಧಿಕಾರಿಗಳು ಇತ್ತ ಗಮನ ಹರಿಸಿ ಇಂತಹ ಅಂಗನವಾಡಿ ಕಟ್ಟಡಗಳು ಸುಧಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಇದನ್ನೂ ಓದಿ: ರಾಯಚೂರು | ‘ಏಮ್ಸ್ʼ ಮಂಜೂರಿಗೆ ಸಂಸದರ ಸಕರಾತ್ಮಕ ಪ್ರತಿಕ್ರಿಯೆ: ಬಸವರಾಜ ಕಳಸ

ಈಗಾಗಲೇ ರಾಜ್ಯ ಸರಕಾರ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ, ಆರಂಭಿಸಬೇಕೆಂದು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಮಧ್ಯೆ ಶಿಥಿಲಗೊಂಡಿರುವ ಕೇಂದ್ರಗಳನ್ನು ದುರಸ್ಥಿಗೊಳಿಸುವುದೋ ಅಥವಾ ಪರ್ಯಾಯ ವ್ಯವಸ್ಥೆ ಮಾಡುವುದೋ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ಸಾರ್ವಜನಿಕರ ನಗೆಪಾಟಲಿಗೆ ಸರ್ಕಾರ ಗುರಿಯಾಗಬೇಕಾಗುತ್ತದೆ ಎನ್ನುತ್ತಾರೆ ಗ್ರಾಮಸ್ಥರು.


mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X