ಕೊಪ್ಪಳ | ಬಿಜೆಪಿ ಸೇರಿ ಅಣ್ಣಾಮಲೈ ಪಶ್ಚಾತ್ತಾಪ ಪಡ್ತಿದ್ದಾರೆ: ಸಚಿವ ಶಿವರಾಜ್ ತಂಗಡಗಿ

Date:

Advertisements

ಅಣ್ಣಾಮಲೈ ಒಳ್ಳೆಯ ಐಪಿಎಸ್ ಅಧಿಕಾರಿಯಾಗಿದ್ದರು. ಬಿಜೆಪಿಗೆ ಹೋಗಿ ಮೋಸ ಹೋದರೆ, ಅವರೇ ಪ್ರಾಮಾಣಿಕರನ್ನು ಕರೆದು ಪಕ್ಷದಲ್ಲಿ ಸೇರಿಸಿಕೊಂಡು ಬೀದಿಗೆ ಬಿಡುವ ಕೆಲಸ ಮಾಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಅಣ್ಣಾಮಲೈ ದಕ್ಷ ಅಧಿಕಾರಿಯಾಗಿ ಜನರ ವಿಸ್ವಾಸ ಗಳಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದರಿಂದ ಅವರ ಇಡೀ ಬದುಕು‌ ಏನಾಗಿದೆಯೆಂದು ಗಮನಿಸುತ್ತಿದ್ದೇವೆ. ರಸ್ತೆಯಲ್ಲಿ ನಿಂತು ಬಾರ್ಕೋಲಲ್ಲಿ ತಮ್ಮ ಮೈ ಹೊಡೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ” ಎಂದು ಅಣ್ಣಾಮಲೈ ಅವರ ರಾಜಕೀಯ ದುರಂತ ಬಗ್ಗೆ ಹೇಳಿದರು.

“ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು‌ 11 ವರ್ಷ ಆಯ್ತು. ಇಷ್ಟು ವರ್ಷದಲ್ಲಿ‌ ಅವರು ಮಾಡಿರುವ ಅಭಿವೃದ್ಧಿ ಕೆಲಸ ಏನು? ಕಾಂಗ್ರೆಸ್ ಯೋಜನೆಗಳ ಹೆಸರು ಬದಲಾಯಿಸಿ ತಮ್ಮ ಯೋಜನೆ ಅಂತ ಹೇಳ್ತಿದ್ದಾರೆ. ಇವರು ಸಾಧ್ಯವಾದಷ್ಟು ಜನರ ಕಣ್ಣಿಗೆ ಮಣ್ಣೆರಚಿ ಮೋಸ ಮಾಡಲು ಪ್ರಯತ್ನ ಪಡುತ್ತಿದ್ದಾರೆ” ಎಂದರು.

Advertisements

“ಅಧಿಕಾರ ಬಂದು ನೂರು ದಿನದಲ್ಲಿ ಸ್ವೀಸ್ ಬ್ಯಾಂಕ್‌ನಿಂದ ಕಪ್ಪು ಹಣವನ್ನು ಹೊರಗರ ತರುತ್ತೇವೆಂದು ಹೇಳಿದ್ದರು, ತಂದರಾ? 15 ಲಕ್ಷ ಭಾರತೀಯರ ಖಾತೆಗೆ ಹಾಕಿದರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಟ್ಟರಾ? ಯಾವುದೂ ತರಲಿಲ್ಲ, ಜನರಿಗೂ ಕೊಡಲಿಲ್ಲ” ಎಂದು ಬಿಜೆಪಿ ಹಾಗೂ ಪ್ರಧಾನಿಯವರ ಸುಳ್ಳುಗಳ ಜೋಡಿ ಸರಮಾಲೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ನಗರದಲ್ಲಿ ಸುರಿದ ಮೊದಲ ಮಳೆಗೆ ತಂಪಾದ ಇಳೆ

“ಬಿಜೆಪಿಯವರಿಗೆ ತಮ್ಮ ರಾಜಕಾರಣ ಹಾಗೂ ರಾಜಕೀಯಕ್ಕೆ ಯಾರ ಅವಶ್ಯಕತೆ ಎಷ್ಟು ಬೇಕೋ ಅಷ್ಟು ಬಳಸಿಕೊಳ್ಳುತ್ತಾರೆ. ರಾಜಕೀಯ ಲಾಭವಾದ ಮೇಲೆ ಅವರನ್ನು ಬಿಸಾಡುತ್ತಾರೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾಗ ನನ್ನನ್ನು ಕರೆದುಕೊಂಡು ಹೋಗಿ ‘ಮುಖ್ಯಮತ್ರಿ ಸ್ಥಾನ ಬಿಟ್ಟು ಉಳಿದ ಎಲ್ಲಾ ಇಲಾಖೆ ಕೊಡುತ್ತೇವೆಂದು ಹೇಳಿದ್ದರು. ಬಹುಮತ ಸಾಬೀತಾಗಿ ಅಧಿಕಾರಕ್ಕೆ ಬಂದ ಮೇಲೆ ಒಳ್ಳೆಯ ಖಾತೆಗಳನ್ನು ಅವರು ತೆಗೆದುಕೊಂಡರು ನಮಗೆ ಯಾವುದೋ ಖಾತೆ ಕೊಟ್ಟರು” ಎಂದು ಹೇಳಿದರು.

“ಬಿಜೆಪಿಯವರು ರಾಜಕಾರಣ ಮಾಡಲು ಅಮಾಯಕರು, ಜನಸಾಮಾನ್ಯರು ಹಾಗೂ ಯುವಜನತೆಯನ್ನು ರಾಜಕೀಯವಾಗಿ ಬಳಸಿಕೊಂಡು ದಾರಿತಪ್ಪಿಸುವಂಥ ಕೆಲಸ ಮಾಡುತ್ತಾರೆ.‌ ಅವರಿಗೆ ತಮ್ಮ ಮಕ್ಕಳ ಮೇಲಿರುವ ಜವಾಬ್ದಾರಿ ಹಾಗೂ ಕಾಳಜಿ, ಬಡವರ ಮಕ್ಕಳ ಮೇಲಿಲ್ಲ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X