CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

Date:

Advertisements

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಆಟಗಾರ ಎಂ.ಎಸ್‌ ಧೋನಿ ಅವರು ಐಪಿಎಲ್‌ಗೆ ನಿವೃತ್ತಿ ಘೋಷಿಸುವ ಬಗ್ಗೆ ಆಗ್ಗಾಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಇಂದು (ಮಾರ್ಚ್‌ 5) ಸಿಎಸ್‌ಕೆ ಮತ್ತು ಡಿಸಿ ನಡುವೆ ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಸ್ಟೇಡಿಯಂನಲ್ಲಿ ಧೋನಿ ಅವರ ಪೋಷಕರಾದ ಪ್ಯಾನ್ ಸಿಂಗ್ ಧೋನಿ ಮತ್ತು ದೇವಕಿ ದೇವಿ ಅವರು ಕಾಣಿಸಿಕೊಂಡಿದ್ದಾರೆ.

2008ರಲ್ಲಿ ಐಪಿಎಲ್‌ ಆರಂಭವಾಗಿ, ಧೋನಿ ಅವರು ಸಿಎಸ್‌ಕೆ ತಂಡವನ್ನು ಸೇರಿದ ಬಳಿಕ, ಧೋನಿ ಅವರ ಪೋಷಕರು ಇದೇ ಮೊದಲ ಬಾರಿಗೆ ಐಪಿಎಲ್‌ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದಿದ್ದಾರೆ. ಧೋನಿ ಅವರ ಪತ್ನಿ ಸಾಕ್ಷಿ ಮತ್ತು ಮಗಳು ಝಿವಾ ಕೂಡ ಇದ್ದಾರೆ. ಹೀಗಾಗಿ, ಬಹುಶಃ ಧೋನಿ ಅವರು ಇಂದು ಐಪಿಎಲ್‌ಗೆ ನಿವೃತ್ತಿ ಘೋಷಿಸಬಹುದು ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ನೆಟ್ಟಿಗರು ಧೋನಿ ನಿವೃತ್ತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ಪಂದ್ಯಕ್ಕೂ ಮುನ್ನ, ಸಿಎಸ್‌ಕೆ ನಾಯಕ ರುತುರಾಜ್ ಗೈಕ್ವಾಡ್ ಅವರಿಗೆ ಗಾಯಗಳಾಗಿರುವ ಕಾರಣ, ಎಂಎಸ್ ಧೋನಿ ಅವರು ಸಿಎಸ್‌ಕೆ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಆದಾಗ್ಯೂ, ಗೈಕ್ವಾಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisements

ಈ ಬೆನ್ನಲ್ಲೇ, ಧೋನಿ ಅವರ ಪೋಷಕರು ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಹಾಗೆ ನೋಡಿದರೆ, ಈ ಹಿಂದೆ, ಯಾವುದೇ ಟೂರ್ನಿಯ ಕೊನೆಯ ಸಮಯದಲ್ಲಿ ನಿವೃತ್ತಿ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬರುತ್ತಿದ್ದರು. ಆದರೆ, ಇತ್ತೀಚೆಗೆ, ಟೂರ್ನಿಯ ಮಧ್ಯದಲ್ಲಿಯೂ ನಿವೃತ್ತಿಯ ಕುರಿತು ಚರ್ಚೆಗಳಾಗುತ್ತಿವೆ. ಶನಿವಾರ ಧೋನಿ ನಿವೃತ್ತರಾಗಲಿದ್ದಾರೆಯೇ ಎಂದು ಹಲವರು ಆಶ್ಚರ್ಯಪಟ್ಟಿದ್ದಾರೆ. ಆದರೆ, ಈ ಬಗ್ಗೆ ಧೋನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X