ಬೆಂಗಳೂರು | ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಚಾಕು ಇರಿತ; ಆರೋಪಿಗಳ ಪತ್ತೆಗೆ ಶೋಧ

Date:

Advertisements

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಬೆಂಗಳೂರು ಪಟ್ಟಣದ ಕಮಲಾನಗರದಲ್ಲಿ ನಡೆದಿದೆ.

ಬಸವೇಶ್ವರ ನಗರ ನಿವಾಸಿ ಚಿರಂಜೀವಿ(32) ಚಾಕು ಇರಿತಕ್ಕೆ ಒಳಗಾದವರು. ಚಿರಂಜೀವಿ ತನ್ನ ಸ್ನೇಹಿತನ ಜತೆ ಬೈಕಿನಲ್ಲಿ ಅತ್ತೆಯ ಮನೆಗೆ ತೆರಳಿದ್ದರು. ಈ ವೇಳೆ ಬೈಕ್ ಇಳಿದು ಮನೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಕಮಲಾನಗರದ ಕೆರೆ ಅಂಗಳದ ವೀರಭದ್ರೇಶ್ವರ ಚಿತ್ರಮಂದಿರದ ಬಳಿ ಬೈಕ್‌ನಲ್ಲಿ ಬಂದಿದ್ದ ಅಪರಿಚಿತರು, ಇವರಿಗೆ ಡಿಕ್ಕಿ ಹೊಡೆಯುವಂತೆ ವೇಗವಾಗಿ ಹೋಗಿದ್ದರು. ಇದನ್ನು ಕಂಡ ಚಿರಂಜೀವಿ ಅವರು ನಿಧಾನವಾಗಿ ನೋಡಿಕೊಂಡು ಬೈಕ್‌ ಚಾಲನೆ ಮಾಡುವಂತೆ ಹೇಳಿದ್ದರು. ಅಷ್ಟಕ್ಕೇ ಕೋಪಗೊಂಡ ಆರೋಪಿಗಳು, ‘ನಮ್ಮೆದುರೇ ಎಗರಾಡುತ್ತೀಯಾ’ ಎಂದು ಅವರ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅತ್ಯಾಚಾರ ಎಸಗಿ, ನಗ್ನ ಫೋಟೊ ವಿಡಿಯೊ ಚಿತ್ರೀಕರಿಸಿದ್ದ ಬ್ಯಾಡ್ಮಿಂಟನ್ ತರಬೇತುದಾರ ಬಂಧನ

Advertisements

“ಹಲ್ಲೆಯಿಂದ ಗಾಯಗೊಂಡಿದ್ದ ಚಿರಂಜೀವಿಯವರು ಕುಸಿದು ಬಿದ್ದಿದ್ದರು. ಚಿರಂಜೀವಿಯವರ ಸಹೋದರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಚಿಕಿತ್ಸೆ ಪಡೆದು ಚೇತರಿಸಿಕೊಂಡ ಅವರು ಬಸವೇಶ್ವರ ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ” ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ರೌಡಿಶೀಟರ್‌ವೊಬ್ಬ ಇತ್ತೀಚೆಗೆ ಸುಖಾಸುಮ್ಮನೆ ಫೆಬ್ರವರಿ 8ರ ಒಂದೇ ದಿನ ರಾತ್ರಿ ಐವರು ನಾಗರಿಕರಿಗೆ ಪ್ರತ್ಯೇಕ ಸ್ಥಳಗಳಲ್ಲಿ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿದ್ದ ಘಟನೆ ಇಂದಿರಾನಗರದಲ್ಲಿ ನಡೆದಿತ್ತು. ಯುವಜನರನ್ನು ಮಾತನಾಡಿಸುವುದು ಅಥವಾ ಬುದ್ಧಿ ಹೇಳುವುದೇ ತಪ್ಪು, ಬುದ್ದಿ ಹೇಳುವವರ ಅಂತ್ಯಕ್ಕೆ ಕಾರಣವಾಗಬಹುದೇ ಎಂಬ ಆತಂಕಕ್ಕೆ ಒಳಗಾಗುವಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X