ವಿನಯ್‌ ಆತ್ಮಹತ್ಯೆ | ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್; ನೋಟಿಸ್‌ ಜಾರಿಗೆ ಸಿದ್ಧತೆ

Date:

Advertisements

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಬೆಂಗಳೂರು ನಗರದ ಹೆಣ್ಣೂರು ಠಾಣೆ ಪೊಲೀಸರು, ಪ್ರಕರಣದ ಕುರಿತು ಶನಿವಾರ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ಜಿಲ್ಲಾ ಕಾಂಗ್ರೆಸ್‌ ವಕ್ತಾರ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್ ದಾಖಲಿಸಿ ಆರೋಪಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

“ವಿನಯ್ ಅವರ ಮೊಬೈಲ್, ಲ್ಯಾಪ್‌ಟಾಪ್‌ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದ ಮರಣ ಪತ್ರವನ್ನು ಜಪ್ತಿ ಮಾಡಿಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‌ಎಸ್‌ಎಲ್‌) ರವಾನೆ ಮಾಡಲಾಗಿದೆ. ವಿನಯ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಯಾರಿಗೆಲ್ಲಾ ಕರೆ ಮಾಡಿದ್ದರು? ಯಾರೊಂದಿಗೆ ಎಷ್ಟು ಸಮಯ ಮಾತುಕತೆ ನಡೆಸಿದ್ದರು ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮೊಬೈಲ್‌ ಕರೆಗಳ ವಿವರ ಪಡೆದುಕೊಳ್ಳಲಾಗುತ್ತಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ವಿರಾಜಪೇಟೆ ಕ್ಷೇತ್ರದ ಶಾಸಕರೂ ಆಗಿರುವ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ ಎಸ್‌ ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್‌ಗೌಡ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕೆಂದು ವಿನಯ್ ಸಹೋದರ ಜೀವನ್ ಅವರು ಎರಡನೇ ಬಾರಿಗೆ ದೂರು ನೀಡಿದ್ದಾರೆ. ಅವರ ದೂರನ್ನೂ ಕೂಡಾ ಪರಿಶೀಲಿಸಲಾಗುತ್ತಿದೆ” ಎಂದು ಮೂಲಗಳು ತಿಳಿಸಿವೆ.

Advertisements

ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

“ಕಾಂಗ್ರೆಸ್‌ ಶಾಸಕರಾದ ಪೊನ್ನಣ್ಣ ಮಂಥರ್‌ ಗೌಡ ಅವರ ಹೆಸರನ್ನು ವಿನಯ್‌ ಆತ್ಮಹತ್ಯೆ ಪ್ರಕರಣದ ಎಫ್‌ಐಆರ್‌ನಲ್ಲಿ ಸೇರಿಸಬೇಕು ಎನ್ನುವ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಆಗದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರ ಜತೆ ಮಾತನಾಡಿ ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿನಯ್‌ ಆತ್ಮಹತ್ಯೆ | ಕಾಂಗ್ರೆಸ್ಸಿಗರ ಮೇಲಿನ ಆರೋಪವನ್ನು ರಾಯಕೀಯ ದಾಳ‌ವಾಗಿ ಬಳಸುತ್ತಿದೆಯೇ ಬಿಜೆಪಿ?

“ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭವಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತನಿಖೆ ನಡೆಯುವಾಗ ಪ್ರಕರಣ ಕುರಿತು ಮಾತನಾಡುವುದು ಸರಿಯಲ್ಲ. ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಅವರಿಗೆ ಕರಗತವಾಗಿದೆ” ಎಂದು ಸಿದ್ದರಾಮಯ್ಯ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X