ಒತ್ತುವರಿ ಆತಂಕ ನಿವಾರಣೆಗೆ ಅರಣ್ಯ – ಕಂದಾಯ ಇಲಾಖೆ ಜಂಟಿ ಸಮೀಕ್ಷೆ: ಸಚಿವ ಈಶ್ವರ್​ ಖಂಡ್ರೆ

Date:

Advertisements
  • ಈವರೆಗೆ ನೆಟ್ಟ ಸಸಿಗಳ ಬೆಳವಣಿಗೆ ಬಗ್ಗೆಯೂ ಪರಿಶೀಲನೆ
  • ರಾಮನಗರ-ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ‘ಆನೆ ಕಾರ್ಯಪಡೆ’

ಅನೇಕ ಕಡೆ ಅರಣ್ಯ ಒತ್ತುವರಿ ಆಗಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ. ಅವುಗಳನ್ನೆಲ್ಲ ತೆರವು ಮಾಡುತ್ತೇವೆ. ಆದರೆ ರೈತರು, ಬಡವರು, ಬುಡಕಟ್ಟು ಸಮುದಾಯವರಿಗೂ ಕೂಡ ಸಾಮಾಜಿಕ ನ್ಯಾಯ ಒದಗಸಿಕೊಡಬೇಕಾದುದು ನಮ್ಮ ಕರ್ತವ್ಯ. ಅದಕ್ಕಾಗಿ ಅರಣ್ಯ ಮತ್ತು ಕಂದಾಯ ಇಲಾಖೆಯು ಜಂಟಿ ಸಮೀಕ್ಷೆ ಮಾಡಿ, ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್​ ಖಂಡ್ರೆ ತಿಳಿಸಿದ್ದಾರೆ.

ವಿಧಾನ ಸೌಧದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆಯ ಹೊಸ ಲಾಂಛನ ಬಿಡುಗಡೆ ಮಾಡಿ ಅವರು ಮಾತನಾಡಿದರು.

“ಮುಂದಿನ ಮೂರು ತಿಂಗಳಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆ ಸೇರಿ ಜಂಟಿ ಸಮೀಕ್ಷೆ ನಡೆಸಲು ನಿರ್ಧರಿಸಿವೆ. ಈ ಜಂಟಿ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಸಹಿತ ಕೇಂದ್ರ ಹಾಗೂ ಸುಪ್ರೀಂ ಕೋರ್ಟಿಗೂ ಸಲ್ಲಿಸುತ್ತೇವೆ” ಎಂದು ತಿಳಿಸಿದರು.

Advertisements

“ಕಳೆದ ವರ್ಷ 51 ಜನ ಆನೆ ಮತ್ತು ಇತರೆ ಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದ್ದಾರೆ. ಮಾನವ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಶೀಘ್ರದಲ್ಲೇ ರಾಮನಗರ-ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ‘ಆನೆ ಕಾರ್ಯಪಡೆ’ ಆರಂಭಿಸಲಾಗವುದು. ರಾಜ್ಯದಲ್ಲಿ ಈಗಾಗಲೇ ಐದು ಕಡೆ ಆನೆ ಕಾರ್ಯಪಡೆ ಕಾರ್ಯಾಚರಿಸುತ್ತಿದೆ” ಎಂದು ಸಚಿವ ಈಶ್ವರ್​ ಖಂಡ್ರೆ ಮಾಹಿತಿ ನೀಡಿದರು.

“ನಾನು ಇಲಾಖೆಯ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಾಲ್ಕು ಜನ ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ಮತ್ತು ತಿಂಗಳಿಗೆ 4 ಸಾವಿರ ಮಾಸಾಶನವನ್ನು 5 ವರ್ಷಗಳವರೆಗೆ ನೀಡಲಾಗುವುದು” ಎಂದು ಖಂಡ್ರೆ ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ವಿಚಾರವನ್ನು ಪ್ರಸ್ತಾಪಿಸಿದ ಸಚಿವರು, “335 ಹುದ್ದೆಗಳಿಗೆ ಅನುಮೋದನೆ ಸಿಕ್ಕಿದೆ. ಉಳಿದಂತೆ ಖಾಲಿ ಇರುವ ಹುದ್ದೆಗಳ ಬಗ್ಗೆ ವರದಿ ಕೇಳಿದ್ದೇವೆ. ಅದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ರೈಲ್ವೆ ಬ್ಯಾರಿಕೇಡ್ ಬಗ್ಗೆ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಆನೆಗಳು ನಾಡಿಗೆ ಬರುವುದರಿಂದ ಅಪಾಯ ಹೆಚ್ಚು. 1 ಕಿ.ಮೀ ಬ್ಯಾರಿಕೇಡ್ ನಿರ್ಮಾಣಕ್ಕೆ ಅಂದಾಜು ಒಂದೂವರೆ ಕೋಟಿ ಬೇಕಾಗುತ್ತದೆ. 641 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಬೇಕಾಗುತ್ತದೆ ಎಂದು ಪ್ರಸ್ತಾವನೆ ಬಂದಿದೆ. ಅದರಲ್ಲಿ ಈಗಾಗಲೇ 330 ಕಿ.ಮೀ ನಿರ್ಮಿಸಲಾಗಿದೆ. ಇನ್ನು ಬಾಕಿಯುಳಿದಿರುವ 311 ಕಿ.ಮೀ. ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚು ಅನುದಾನ ಬೇಕಿದೆ. ಉಳಿದ ಕಾಮಗಾರಿ ಮಾಡಲು ಬಜೆಟ್ ನಲ್ಲಿ ಹೆಚ್ಚಿನ ಹಣ ಕೋರಲಾಗಿದೆ. 3 ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲಾಗಿದೆ. ಹೀಗಾಗಿ, ಹೆಚ್ಚುವರಿ 200 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತೇವೆ” ಎಂದು ತಿಳಿಸಿದರು.

“ಜುಲೈ 1ರಿಂದ 7ರವರೆಗೆ ವನಮಹೋತ್ಸವ ಆಚರಣೆ ಮಾಡಲಾಗುವುದು. ವರ್ಷದಲ್ಲಿ 5 ಕೋಟಿ ಸಸಿ ನೆಡುವ ಗುರಿಯನ್ನು ಇಲಾಖೆ ಹೊಂದಿದೆ. ಅಲ್ಲದೇ, ಇಲ್ಲಿಯವರೆಗೆ ಎಷ್ಟು ಸಸಿ ನೆಟ್ಟಿದ್ದೇವೆ. ಅದರ ಬಗ್ಗೆಯೂ ವರದಿಯನ್ನು ತರಿಸಿದ್ದೇವೆ. ಸುಮಾರು 50 ರಿಂದ 60 ಶೇ. ಅಷ್ಟೇ ಉಳಿದಿವೆ. ಈ ಬಾರಿ ನೆಡಲಾಗುವ ಸಸಿಗಳ ಜಿಯೋ ಟ್ಯಾಗ್ ಮಾಡಲಾಗುತ್ತಿದ್ದು, ಕನಿಷ್ಠ ಶೇ.80ರಷ್ಟು ಸಸಿ ಉಳಿಸಲು ಪ್ರಯತ್ನಿಸಲಾಗುವುದು. ಅಲ್ಲದೇ, ಈ ಹಿಂದೆ ನೆಟ್ಟ ಗಿಡಮರಗಳ ಬಗ್ಗೆಯೂ ಲೆಕ್ಕ ಪರಿಶೀಲನೆ ನಡೆಸುತ್ತೇವೆ” ಎಂದು ಸಚಿವ ಖಂಡ್ರೆ ತಿಳಿಸಿದರು.

ಹೊಸ ಲಾಂಛನ ಮಾಡಿದವರಿಗೆ ಹೆಚ್ಚುವರಿ ₹30 ಸಾವಿರ ಬಹುಮಾನ
“ಅರಣ್ಯ ಇಲಾಖೆಯು ದಶಕಗಳಿಂದ ಕಾರ್ಯಾಚರಿಸುತ್ತಿದ್ದರೂ ನಮ್ಮದೇ ಆದಂತಹ ಲಾಂಛನ ಇರಲಿಲ್ಲ. ಹೀಗಾಗಿ ಈ ಇಲಾಖೆಯು ಕಳೆದ ಡಿಸೆಂಬರ್‍‌ನಲ್ಲಿ ಲಾಂಛನ ಸ್ಪರ್ಧೆ ನಡೆಸಿತ್ತು. ಇದರಲ್ಲಿ ಕಲಾವಿದರು ಸೇರಿದಂತೆ ಅನೇಕ ಮಂದಿ ಸಾರ್ವಜನಿಕರು ಭಾಗವಹಿಸಿದ್ದರು. ಅಂತಿಮವಾಗಿ ಆಯ್ಕೆ ಸಮಿತಿಯು ಅನುಮೋದಿಸಿದ್ದ ಹೊಸ ಲಾಂಛನವನ್ನು ಬಿಡುಗಡೆಗೊಳಿಸಿದ್ದೇವೆ. ಇದನ್ನು ರಚಿಸಿದ ಮೈಸೂರಿನ ಶಮಂತ್ ಗುರು ಅವರು ವಿಜೇತರಾಗಿದ್ದಾರೆ. ಅವರಿಗೆ ಈ ಹಿಂದೆ ₹20 ಸಾವಿರ ಬಹುಮಾನ ಎಂದು ಘೋಷಿಸಿ, ನೀಡಲಾಗಿತ್ತು. ಈಗ ₹30 ಸಾವಿರ ಹೆಚ್ಚುವರಿ ಮಾಡಿ, ಇಲಾಖೆಯ ವತಿಯಿಂದ ಒಟ್ಟು ₹50 ಸಾವಿರ ನೀಡಲಾಗುವುದು” ಎಂದು ಈಶ್ವರ ಖಂಡ್ರೆ ತಿಳಿಸಿದರು.

karnataka forest deparment new logo launced
ಅರಣ್ಯ ಇಲಾಖೆಯ ಹೊಸ ಲಾಂಛನ

ಹೊಸ ಲಾಂಛನ (ಲೋಗೋ) ಹೇಗಿದೆ?
ಅರಣ್ಯ ಇಲಾಖೆಯ ಹೊಸ ಲಾಂಛನವು ಕರ್ನಾಟಕದ ನಕ್ಷೆಯಾಕಾರದಲ್ಲಿದೆ. ರಾಜ್ಯದ ಅರಣ್ಯ ಹಾಗೂ ವನ್ಯಜೀವಿ ಸಂಪತ್ತನ್ನು ಪ್ರತಿನಿಧಿಸುವ ರಾಜ್ಯ ಪ್ರಾಣಿ ಆನೆ, ರಾಜ್ಯ ಪಕ್ಷಿ ನೀಲಕಂಠ, ರಾಜ್ಯ ಮರವಾದ ಶ್ರೀಗಂಧ, ರಾಜ್ಯ ಚಿಟ್ಟೆ ಸ್ವರ್ಣೆ ಹಾಗೂ ರಾಷ್ಟ್ರೀಯ ಪ್ರಾಣಿ ಮಾತ್ರವಲ್ಲ ರಾಜ್ಯದ ಪ್ರಮುಖ ವನ್ಯಜೀವಿಯೂ ಆಗಿರುವ ಹುಲಿಯ ಚಿತ್ರ ಹಾಗೂ ಎಲ್ಲದಕ್ಕೂ ಮೂಲ ಆಧಾರವೆಂಬಂತೆ ನಕ್ಷೆಯ ಬುಡದಲ್ಲಿ ನೀರಿನ ಮೂಲಗಳನ್ನು ಪ್ರತಿಬಿಂಬಿಸುವ ನೀಲಿಬಣ್ಣವನ್ನು ನೂತನ ಲೋಗೋ ಒಳಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X