ಕೊಚ್ಚಿ | ಕಂಪನಿಯ ಟಾರ್ಗೆಟ್‌ ಪೂರೈಸದ್ದಕ್ಕೆ ಸಿಬ್ಬಂದಿಗಳಿಗೆ ಅಮಾನವೀಯ ಶಿಕ್ಷೆ, ಕ್ರೌರ್ಯ

Date:

Advertisements

ಉದ್ಯೋಗಿಗಳ ಮೇಲೆ ಉದ್ಯೋಗದಾರರ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳಗಳು ಆಗ್ಗಾಗ್ಗೆ ವರದಿಯಾಗುತ್ತಿವೆ. ಮಾತ್ರವಲ್ಲ, ದೌರ್ಜನ್ಯಗಳು ಮಿತಿಮೀರುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದಾಗಿ ಹಲವು ಉದ್ಯೋಗಿಗಳು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಇದೀಗ, ಕಂಪನಿಯೊಂದು ತಾನು ಹಾಕಿದ್ದ ಟಾರ್ಗೆಟ್‌ ಪೂರೈಸದ ಕಾರಣಕ್ಕೆ, ಉದ್ಯೋಗಿಗಳಿಗೆ ಅಮಾನವೀಯವಾಗಿ ಶಿಕ್ಷೆ ನೀಡಿ, ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಕೊಚ್ಚಿಯಲ್ಲಿರುವ ‘ಹಿಂದುಸ್ತಾನ್ ಪವರ್ ಲಿಂಕ್ಸ್‌’ ಎಂಬ ಕಂಪನಿಯು ತಮ್ಮ ಸಿಬ್ಬಂದಿಗಳಿಗೆ ನಾಯಿಯಂತೆ ಕುತ್ತಿಗೆಗೆ ಸರಪಳಿ ಹಾಕಿ, ನಾಯಿಯಂತೆ ನಡೆಸಿ, ನಾಯಿಯಂತೆ ಆಹಾರ ತಿನ್ನುವಂತೆ ಮಾಡಿದೆ. ಮಾತ್ರವಲ್ಲದ, ಸಿಬ್ಬಂದಿಗಳು ಪರಸ್ಪರರ ಗುಪ್ತಾಂಗವನ್ನು ಹಿಡಿದುಕೊಳ್ಳುವಂತೆ ಒತ್ತಾಯಿಸಿ ಕ್ರೌರ್ಯ ಮೆರೆದಿದೆ ಎಂದು ವರದಿಯಾಗಿದೆ.

ಕಂಪನಿಯ ಕ್ರೌರ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಸರಪಳಿ ಹಾಕಿದ್ದು, ಅವರನ್ನು ನಾಯಿಯಂತೆ ನಡೆಸಿದ್ದು, ನಾಯಿಯ ರೀತಿಯಲ್ಲಿಯೇ ಆಹಾರ ತಿನ್ನುವಂತೆ ಮಾಡಿರುವುದು, ಬಾಯಿಂದ ನಾಣ್ಯಗಳನ್ನು ಎತ್ತಿಕೊಳ್ಳುವಂತೆ ಒತ್ತಾಯಿಸುವುದು ಸೆರೆಯಾಗಿದೆ.

Advertisements

ಕಂಪನಿಯ ಮ್ಯಾನೇಜರ್‌ ಈ ರೀತಿ ಕ್ರೌರ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇಂತಹ ಅಮಾನವೀಯ ಕ್ರೌರ್ಯದ ಶಿಕ್ಷೆಗೆ ಒಳಗಾಗಿರುವ ಸಿಬ್ಬಂದಿಗಳು ಕಂಪನಿಯ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮನೆ-ಮನೆಗೆ ತೆರಳಿ ಕಂಪನಿಯ ಉತ್ಪನ್ನಗಳನ್ನು ಮಾರಾಟ ಮಾಡಬೇಕಿತ್ತು. ಆದರೆ, ತಿಂಗಳ ಟಾರ್ಗೆಟ್‌ನಷ್ಟು ಉತ್ಪನ್ನಗಳನ್ನು ಮಾರಾಟ ಮಾಡಲಾಗದ ಕಾರಣ ಅವರ ಮೇಲೆ ಇಂತಹ ಕ್ರೌರ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಈ ವರದಿ ಓದಿದ್ದೀರಾ?: ವಕ್ಫ್ ಮಸೂದೆ ಬಗ್ಗೆ ಚರ್ಚೆ ವೇಳೆ ರಾಹುಲ್ ಗಾಂಧಿ ಮೌನ ಸರಿಯೇ?

ಕ್ರೌರ್ಯದ ವಿಡಿಯೋ ವೈರಲ್ ಆದ ಬಳಿಕ, ಘಟನೆ ಬಗ್ಗೆ ತನಿಖೆ ನಡೆಸುವಂತೆ ಕೇರಳ ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಆದೇಶಿಸಿದ್ದಾರೆ. ಆದರೆ, ಕಂಪನಿ ವಿರುದ್ದದ ಆರೋಪವನ್ನು ಕಂಪನಿಯ ಮಾಲೀಕ ನಿರಾಕರಿಸಿದ್ದಾರೆ. ಘಟನೆಗೂ ತಮ್ಮ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಮತ್ತೊಂದು ಗಮನಾರ್ಹ ವಿವಾರವೆಂದರೆ, ಇದೇ ಕಂಪನಿಯ ಮಾಲೀಕನನ್ನು ಈ ಹಿಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆತ ಈಗ ಜಾಮೀನು ಪಡೆದು ಹೊರಬಂದಿದ್ದಾರೆ ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X