ಕಲಬುರಗಿ | ಪ್ರೇಮ ವೈಫಲ್ಯ : ಸೇತುವೆ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

Date:

Advertisements

ಪ್ರೀತಿಸಿದ್ದ ಹುಡುಗಿ ಕೈಕೊಟ್ಟಿದ್ದ ಕಾರಣಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲ್ಲೂಕಿನ ಕುರಿಕೋಟಾ ಬಳಿ ನಡೆದಿದೆ.

ಕಮಲಾಪುರ ತಾಲ್ಲೂಕಿನ ಮಹಾಗಾಂವ ಮೂಲದ, ಕಲಬುರಗಿಯಲ್ಲಿ ವಾಸವಿದ್ದ ಪ್ರಥಮೇಶ (21) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ.

ಏ.3ರಂದು ಪ್ರಥಮೇಶ ಮನೆಯಿಂದ ಗ್ರಂಥಾಲಯಕ್ಕೆ ಹೋಗುವುದಾಗಿ ಹೇಳಿ ಬೈಕ್‌ನಲ್ಲಿ ತೆರಳಿದ್ದ. ರಾತ್ರಿಯಾದರೂ ಮನೆಗೆ ಬರಲಿಲ್ಲ. ಆತನ ಫೋನ್‌ ಸ್ವಿಚ್ ಆಫ್ ಆಗಿತ್ತು. ಸೇತುವೆ ಮೇಲಿಂದ ಬೆಣ್ಣೆತೊರೆ ಹಿನ್ನೀರಿನಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಪೊಲೀಸರು ಅಗ್ನಿಶಾಮಕ ದಳ ಹಾಗೂ ಮೀನುಗಾರರ ನೆರವಿನಿಂದ ಶೋಧಕಾರ್ಯ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಶನಿವಾರ (ಏ.5) ಬೆಳಿಗ್ಗೆ ನೀರಿನಲ್ಲಿ ಪ್ರಥಮೇಶನ ಮೃತ ದೇಹ ಪತ್ತೆಯಾಗಿದೆ.

Advertisements

ಮೃತ ಪ್ರಥಮೇಶ ಅವರು ಯುವತಿಯೊಬ್ಬರನ್ನು ಪ್ರಿತಿಸುತ್ತಿದ್ದರು. ಬಹಳ ಸಲುಗೆಯಿಂದಲೂ ವರ್ತಿಸಿ, ಅವಳ ಜೊತೆ ಸಂಬಂಧವೂ ಹೊಂದಿದ್ದ. ಎರಡು ತಿಂಗಳ ಬಳಿಕ ಆ ಯುವತಿ, ಬೇರೆ ಹುಡುಗನನ್ನು ಪ್ರೀತಿಸುವುದಾಗಿ ಹೇಳಿ, ತನ್ನನ್ನು ಮರೆಯುವಂತೆ ಪ್ರಥಮೇಶಗೆ ಹೇಳಿದ್ದಳು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಏ.16ರಂದು ಸಿಎಂ ಸಿದ್ದರಾಮಯ್ಯ ಬೀದರ್ ಜಿಲ್ಲೆ ಪ್ರವಾಸ

ಸ್ಥಳಕ್ಕೆ ಮಹಾಗಾಂವ್‌ ಠಾಣೆಯ ಪಿಎಸ್ಐ ಆಶಾ ರಾಠೋಡ, ಸಿಬ್ಬಂದಿ ಶವ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಮೃತ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X