ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾದ ಆರ್‌ಜೆಡಿ ನಾಯಕರು

Date:

Advertisements

ವಕ್ಫ್ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಈ ಬೆನ್ನಲ್ಲೇ ವಿಪಕ್ಷಗಳು, ಹಲವು ಸಂಘಟನೆಗಳು, ಪ್ರಗತಿಪರರು ಈ ವಿವಾದಾತ್ಮಕ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕದ ತಟ್ಟುತ್ತಿದ್ದಾರೆ. ಇದೀಗ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯಸಭಾ ಸಂಸದ ಮನೋಜ್ ಝಾ ಮತ್ತು ನಾಯಕ ಫಯಾಜ್ ಅಹ್ಮದ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಮಸೂದೆಯಲ್ಲಿರುವ ನಿಬಂಧನೆಗಳನ್ನು ಪ್ರಶ್ನಿಸಿ ಆರ್‌ಜೆಡಿ ನಾಯಕರು ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿದ್ದಾರೆ. ಈ ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಗೆ ಗಮನಾರ್ಹ ಪರಿಣಾಮಗಳನ್ನು ಬೀರಬಹುದು ಎಂದು ಆರ್‌ಜೆಡಿ ನಾಯಕರು ವಾದಿಸಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಎಪಿ ಶಾಸಕ ಅಮಾನತುಲ್ಲಾ

Advertisements

ಸಂಸತ್ತಿನ ಎರಡೂ ಸದನಗಳಲ್ಲಿ ಎರಡು ದಿನಗಳ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆ 2025 ಅನ್ನು ಈ ವಾರ ಅಂಗೀಕರಿಸಲಾಯಿತು. ರಾಜ್ಯಸಭೆಯಲ್ಲಿ 128 ಮಂದಿ ಮಸೂದೆ ಪರ, 95 ಮಸೂದೆ ವಿರುದ್ಧ ಮತ ಹಾಕಿದ್ದಾರೆ. ಲೋಕಸಭೆಯಲ್ಲಿ ಮಸೂದೆಯನ್ನು 288 ಸದಸ್ಯರು ಪರವಾಗಿ ಮತ್ತು 232 ಸದಸ್ಯರು ವಿರೋಧಿಸಿದರು.

ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿರುವ ವಕ್ಫ್ ಮಸೂದೆ ಅಂಗೀಕಾರದ ವಿರುದ್ಧ ಪ್ರತಿಭಟನೆಗಳೂ ನಡೆಯುತ್ತಿದೆ. ಕಾಂಗ್ರೆಸ್, ಎಎಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈಗಾಗಲೇ ವಕ್ಫ್ ಮಸೂದೆ ಪ್ರಶ್ನಿಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ತನ್ನ ಅಖಿಲ ಭಾರತ ಮಹಾ ಅಧಿವೇಶನದಲ್ಲಿ ವಕ್ಫ್ ಮಸೂದೆ ವಿರುದ್ಧ ನಿರ್ಣಯ ಕೈಗೊಂಡಿರುವ ಸಿಪಿಐಎಂ ಕೂಡಾ ಕೋರ್ಟ್ ಕದ ತಟ್ಟುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X