ಚಿಕ್ಕಮಗಳೂರು | ಮರ್ಕಲ್ ಗ್ರಾಮ ಪಂ. ಪಿಡಿಒ ಅಮಾನತು

Date:

Advertisements

ಕರ್ತವ್ಯಲೋಪದ ಆರೋಪದ ಮೇಲೆ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯತಿ ಪಿಡಿಒ ರಘುವೀರ್ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಮರ್ಕಲ್ ಪಂಚಾಯತಿಯ ಪಿಡಿಒ ರಘುವೀರ್ ಮತ್ತು ಅಧ್ಯಕ್ಷ ಮಹೇಶ್‌ ಅವರು ವಿವಿಧ ಸಂದರ್ಭಗಳಲ್ಲಿ ಪಂಚಾಯತಿಯ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಮತ್ತು ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಗಳ ಬಗ್ಗೆ ಶೃಂಗೇರಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಸುದೀಪ್‍ ಅವರು ತನಿಖೆ ನಡೆಸಿದ್ದರು. ತನಿಖಾ ವರಧಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಿದ್ದರು.

ವರದಿಯಲ್ಲಿ ಆರೋಪಗಳು ಸಾಬೀತಾಗಿದ್ದು, ಪಿಡಿಒ ರಘುವೀರ್ ಅವರನ್ನು ಅಮಾನತು ಮಾಡಲಾಗಿದೆ.

Advertisements

ಪಿಡಿಒ ಮತ್ತು ಅಧ್ಯಕ್ಷರು ಪಂಚಾಯಿತಿಯ ಬಿಲ್ ಕಲೆಕ್ಟರ್ ಹೆಸರಿಗೆ ನಿಯಮಬಾಹಿರವಾಗಿ ಹಣ ಪಾವತಿ ಮಾಡಿದ್ದಾರೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಅನುಮತಿ ಪಡೆಯದೇ ಪಂಚಾಯಿತಿಯ ವಾಹನ ದುರಸ್ತಿ ಮಾಡಿಸಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಚುನಾವಣೆಗಳ ಸಮಯದಲ್ಲಿ ಮತಗಟ್ಟೆ ವೆಚ್ಚಕ್ಕಾಗಿ ಸರ್ಕಾರದಿಂದ ಬಂದ ಹಣವನ್ನು ಗ್ರಾಮ ಪಂಚಾಯತಿ ಖಾತೆಗೆ ವರ್ಗಾಯಿಸದೆ ತಾವೇ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಅಲ್ಲದೆ, 15ನೇ ಹಣಕಾಸು ಯೋಜನೆಯ ಕಾಮಗಾರಿಗಳಲ್ಲಿ ತೆರಿಗೆ ಕಠವಾಣೆ ಮಾಡಿಲ್ಲ. ಕಾಮಗಾರಿಗಳಿಗೆ ನಿಗದಿ ಮಾಡಲಾಗಿದ್ದ ಮೊತ್ತಕ್ಕಿಂತ ಹೆಚ್ಚು ಹಣ ಪಾವತಿಸಿದ್ದಾರೆ. ಖಾಸಗಿ ಎಲೆಕ್ಟ್ರೀಕಲ್ ಅಂಗಡಿಗೆ ನಿಯಮ ಬಾಹಿರವಾಗಿ 81,000 ರೂ. ಪಾವತಿಸಿದ್ದಾರೆ. ಹೀಗೆ, ಹಲವಾರು ಸಂದರ್ಭ ಅಧಿಕಾರ ದುರುಪಯೋಗ ಮತ್ತು ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X