ಬೀದರ್‌ | ಕಾನೂನು ಬಾಹಿರ ಚಟುವಟಿಕೆ : ಮಾರ್ಚ್ ತಿಂಗಳಲ್ಲಿ 189 ಪ್ರಕರಣ; 431 ಆರೋಪಿಗಳ ಬಂಧನ

Date:

Advertisements

ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189 ಪ್ರಕರಣಗಳನ್ನು ದಾಖಲಿಸಿ ಬ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ತಿಳಿಸಿದ್ದಾರೆ.

ಬಂಧಿತರಿಂದ ₹35.34 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಗಳ ವಿವರ :

Advertisements

22 ಜೂಜಾಟ ಪ್ರಕರಣಗಳಲ್ಲಿ 227 ಆರೋಪಿತರನ್ನು ಬಂಧಿಸಿ ₹3.03 ಲಕ್ಷ, 11 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 19 ಆರೋಪಿಗಳನ್ನು ಬಂಧಿಸಿ ₹62.70 ಸಾವಿರ, 49 ಮಟ್ಕಾ ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ ₹78.34 ಸಾವಿರ, ಪಡಿತರ ಅಕ್ಕಿ ಅಕ್ರಮ ಸಂಗ್ರಹ 7 ಪ್ರಕರಣಗಳಲ್ಲಿ 11 ಆರೋಪಿತರನ್ನು ಬಂಧಿಸಿ ₹6.43 ಲಕ್ಷ, ಡ್ರಗ್ಸ್ 3 ಪ್ರಕರಣಗಳಲ್ಲಿ 4 ಆರೋಪಿತರನ್ನು ಬಂಧಿಸಿ 22.51 ಲಕ್ಷ, ಹಾಗೂ 97 ಅಬಕಾರಿ ಪ್ರಕರಣಗಳಲ್ಲಿ 105 ಆರೋಪಿಗಳನ್ನು ಬಂಧಿಸಿ ₹1.95 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ʼಆರೋಪಿಗಳು ಪದೇ ಪದೇ ಕಾನೂನು ವಿರುದ್ದ ಚಟುವಟಿಕೆಗಳಲ್ಲಿ ತೊಡಗಿದರೆ ಅಂತಹ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಲಾಗುವುದುʼ ಎಂದು ಎಸ್ಪಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X