ವಕ್ಫ್ ನಂತರ ಕ್ರೈಸ್ತ, ಜೈನ, ಬೌದ್ಧ, ಹಿಂದೂ ದೇವಾಲಯಗಳ ಭೂಮಿಯ ಮೇಲೆ ಬಿಜೆಪಿ ಕಣ್ಣಿಟ್ಟಿದೆಯೇ?

Date:

Advertisements

ವಕ್ಫ್ ಕಾನೂನು ಜಾರಿಗೆ ತಂದ ನಂತರ, ಬಿಜೆಪಿ ಈಗ ಕ್ರೈಸ್ತರು, ಜೈನರು, ಬೌದ್ಧರು ಮತ್ತು ಹಿಂದೂ ದೇವಾಲಯಗಳ ಭೂಮಿಯ ಮೇಲೆ ಕಣ್ಣಿಟ್ಟಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖವಾಣಿಯಾದ ಆರ್ಗನೈಸರ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ ಎನ್‌ಸಿಪಿ (ಎಸ್‌ಪಿ) ನಾಯಕ ಜಿತೇಂದ್ರ ಅವ್ಹಾದ್ ಕೂಡ ಇದೇ ರೀತಿಯ ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ನ ಭಾಗವತರು ಮೌನ ಮುರಿದು ಮೋದಿ ಬಗ್ಗೆ ಗೊಣಗುತ್ತಿರುವುದೇಕೆ?

Advertisements

ಭಾನುವಾರ ಈ ಬಗ್ಗೆ ಶಿವ ಸಂಚಾರ ಸೇನೆಯ (ಶಿವಸೇನೆಯ ಐಟಿ ಮತ್ತು ಸಂವಹನ ವಿಭಾಗ) ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, “ವಕ್ಫ್ ಕಾನೂನಿನ ನಂತರ ಮುಂದಿನ ಹೆಜ್ಜೆ ಕ್ರೈಸ್ತರು, ಜೈನರು, ಬೌದ್ಧರು ಮತ್ತು ಹಿಂದೂ ದೇವಾಲಯಗಳ ಭೂಮಿಯ ಮೇಲೆ ಕಣ್ಣಿಡುವುದಾಗಿದೆ. ತಮ್ಮ ಸ್ನೇಹಿತರಿಗೆ ಈ ಭೂಮಿ ನೀಡುವ ಹುನ್ನಾರವಿದೆ. ಅವರಿಗೆ (ಕೇಂದ್ರದ ಬಿಜೆಪಿ ಸರ್ಕಾರ) ಯಾವುದೇ ಸಮುದಾಯದ ಬಗ್ಗೆ ಪ್ರೀತಿಯಿಲ್ಲ” ಎಂದು ಹೇಳಿದರು.

ಈ ವಾರದ ಆರಂಭದಲ್ಲಿ 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದವು. ನಿರೀಕ್ಷೆಯಂತೆ 288 ಮತಗಳು ಮಸೂದೆ ಪರವಾಗಿ, 232 ಮತಗಳು ಮಸೂದೆ ವಿರುದ್ಧವಾಗಿ ಚಲಾವಣೆಯಾದವು. ರಾಜ್ಯಸಭೆಯಲ್ಲಿ, ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು. ಈ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಿದ್ದು, ಇದೀಗ ಕಾನೂನು ಜಾರಿಯಾಗಲಿದೆ.

ಈ ಕಾನೂನು ದೇಶದಲ್ಲಿ ಮುಸ್ಲಿಂ ಧಾರ್ಮಿಕ ದತ್ತಿಗಳಿಗೆ ಸಂಬಂಧಿಸಿದ ಸುಧಾರಣೆಗಳಿಗೆ ನಾಂದಿ ಹಾಡುತ್ತದೆ ಎಂದು ಸರ್ಕಾರ ಹೇಳುತ್ತದೆ. ಆದರೆ ಇದು ಮುಸ್ಲಿಮರ ಮೇಲೆ ದಾಳಿ, ಕಾನೂನು ಬಾಹಿರವೆಂದು ವಿಪಕ್ಷಗಳು ಆರೋಪಿಸಿದೆ. ಈಗಾಗಲೇ ಈ ವಿವಾದಾತ್ಮಕ ಕಾನೂನು ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿವೆ.

ಇದನ್ನು ಓದಿದ್ದೀರಾ? ವಿಶ್ಲೇಷಣೆ | ಆರ್‌ಎಸ್‌ಎಸ್‌ ಮೀಸಲಾತಿ ವಿರುದ್ಧ ಇಲ್ಲವೇ?

“ಭವಿಷ್ಯದಲ್ಲಿ, ಎಲ್ಲಾ ವಕ್ಫ್ ಭೂಮಿ ಬಿಜೆಪಿಯ ‘ಕೈಗಾರಿಕಾ ಸ್ನೇಹಿತರ’ ಪಾಳಾಗುತ್ತದೆ” ಎಂದು ಠಾಕ್ರೆ ಅವರ ಪಕ್ಷದ ನಾಯಕ ಸಂಜಯ್ ರಾವತ್ ಹೇಳಿದರು. ಇನ್ನು ಎನ್‌ಸಿಪಿ (ಎಸ್‌ಪಿ) ನಾಯಕ ಜಿತೇಂದ್ರ ಅವ್ಹಾದ್, “ಮುಸ್ಲಿಮರನ್ನು ಗುರಿಯಾಗಿಸಿಕೊಂಡ ನಂತರ, ಈಗ ದೇಶದಲ್ಲಿ ಕ್ರೈಸ್ತರ ಸರದಿ ಬಂದಿದೆ” ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖವಾಣಿ, “ವಕ್ಫ್ ಮಂಡಳಿಯಲ್ಲ, ಬದಲಾಗಿ ದೇಶದ ಅತಿದೊಡ್ಡ ಭೂಮಾಲೀಕರು ಭಾರತದ ಕ್ಯಾಥೋಲಿಕ್ ಚರ್ಚ್” ಎಂದು ಹೇಳಿಕೊಂಡಿದೆ. “ಭಾರತದಲ್ಲಿ ಯಾರಿಗೆ ಹೆಚ್ಚು ಭೂಮಿ ಇದೆ? ಕ್ಯಾಥೋಲಿಕ್ ಚರ್ಚ್ vs ವಕ್ಫ್ ಮಂಡಳಿ ಚರ್ಚೆ” ಎಂಬ ಶೀರ್ಷಿಕೆಯ ಲೇಖನವನ್ನು ಏಪ್ರಿಲ್ 3ರಂದು ಪ್ರಕಟಿಸಲಾಗಿದೆ ಎಂದು ಜಿತೇಂದ್ರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವ್ಹಾದ್ ಪ್ರಕಾರ, ಕ್ಯಾಥೋಲಿಕ್ ಚರ್ಚ್ ಭಾರತದಾದ್ಯಂತ ಸುಮಾರು 17.29 ಕೋಟಿ ಎಕರೆ (7 ಕೋಟಿ ಹೆಕ್ಟೇರ್) ಭೂಮಿಯನ್ನು ಹೊಂದಿದೆ ಎಂದು ಲೇಖನವು ಹೇಳಿದೆ. “ಹೆಚ್ಚಿನ ಭೂಮಿಯನ್ನು ಬ್ರಿಟಿಷ್ ಆಳ್ವಿಕೆಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 1927ರಲ್ಲಿ, ಬ್ರಿಟಿಷ್ ಆಡಳಿತವು ಭಾರತೀಯ ಚರ್ಚ್ ಕಾಯ್ದೆಯನ್ನು ಅಂಗೀಕರಿಸಿದೆ. ಚರ್ಚ್‌ಗೆ ದೊಡ್ಡ ಪ್ರಮಾಣದ ಭೂ ಅನುದಾನವನ್ನು ಪಡೆಯಲು ದಾರಿ ಮಾಡಿಕೊಟ್ಟಿದೆ” ಎಂದು ಅವ್ಹಾದ್ ತನ್ನ ಪೋಸ್ಟ್‌ನಲ್ಲಿ ಲೇಖನವನ್ನು ಉಲ್ಲೇಖಿಸಿ ಬರೆದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X