ಮೈಸೂರು | ಕುಡಿಯುವ ನೀರು ಸರಬರಾಜು ಮಾಡುವಂತೆ ಪ್ರತಿಭಟನೆ

Date:

Advertisements

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೊಳೆಯೂರು ಗ್ರಾಮದ 20 ಮನೆಗಳಿಗೆ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಸಂಚಾಲಕ ಬಸವರಾಜು ಮಾತನಾಡಿ ” ಮೊಳೆಯೂರಿನ ಒಂದು ಬೀದಿಯಲ್ಲಿನ 20 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕವಿರದೆ ನೀರಿಗೆ ಪರದಾಡುವಂತಾಗಿದೆ. ಕಳೆದ ಒಂದು ವರ್ಷದಿಂದಲೂ ಸಹ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. ಹಾಗಾಗಿ, ಗ್ರಾಮದ ಜನರು ಪ್ರತಿನಿತ್ಯ ತಮ್ಮ ದೈನಂದಿನ ಬಳಕೆಗೆ ನೀರಿಲ್ಲದೆ ಚಡಪಡಿಸಿದ್ದಾರೆ. ಕುಡಿಯುವ ನೀರಿಗೆ ಹಾಹಕಾರವಿದ್ದು, ವರ್ಷಗಳಿಂದಲೇ ತೊಂದರೆ ಅನುಭವಿಸುತಿದ್ದರು ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆ ” ಎಂದು ಆರೋಪ ಮಾಡಿದರು.

ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆಯು ಇಲ್ಲದೆ ಇರುವುದು ಬಹಳ ಖಂಡನಿಯ. ಈ ಹಿಂದೆ ಹಲವು ಬಾರಿ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದರು ಸಹ ಸಮಸ್ಯೆ ಬಗೆಹರಿದಿಲ್ಲ.ಜಲ ಜೀವನ್ ಮಿಷನ್ ಅಡಿಯಲ್ಲಿ ನೂರಾರು ಕೋಟಿ ಖರ್ಚು ಮಾಡಿ ಕಳಪೆ ಕಾಮಗಾರಿ ಮಾಡಿರುವುದರಿಂದಾಗಿ ಈ ಸಮಸ್ಯೆ ಆಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಭಗತ್ ಸಿಂಗ್, ನೇತಾಜಿ ಕನಸಿನ ಸಮಾಜವಾದಿ ಭಾರತ ನಿರ್ಮಿಸಲು ಸಜ್ಜಾಗಿ : ಮಹಾಂತೇಶ್ ಬೀಳೂರು

ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿ ಜಿಲ್ಲಾ ಸಂಚಾಲಕ ಸುನಿಲ್ ಟಿ ಆರ್ ,ಮೊಳೆಯೂರು ಮುಖಂಡ ನಾಗರಾಜು, ಚಂದ್ರಿಕಾ, ಸುಧ, ತಾಯಮ್ಮ, ಲಕ್ಷಮ್ಮ, ರಮ್ಯ, ಗೌರಿ, ರೇಣುಕಮ್ಮ, ಮಹದೇವಮ್ಮ, ರತ್ನಮ್ಮ, ರೇಖಾ ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X