ಷೇರುಪೇಟೆಯಲ್ಲಿ ಟ್ರಂಪ್ ತಲ್ಲಣ: ಕುಸಿದ 3 ಸಾವಿರಕ್ಕೂ ಅಧಿಕ ಅಂಕ, ಹೂಡಿಕೆದಾರರಿಗೆ 19 ಲಕ್ಷ ಕೋಟಿ ನಷ್ಟ

Date:

Advertisements

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದ ಹೇರಿಕೆಗೆ ಭಾರತ ಸೇರಿದಂತೆ ಜಗತ್ತಿನಾದ್ಯಂತ ಷೇರುಪೇಟೆ ತಲ್ಲಣಗೊಂಡಿದೆ. ಇಂದು (ಏ.07) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 3,000ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದ್ದು ಹೂಡಿಕೆದಾರರು ಭಾರೀ ನಷ್ಟ ಅನುಭವಿಸುವಂತಾಗಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 3,150.12 ಅಂಕಗಳಷ್ಟು ಕುಸಿತದೊಂದಿಗೆ 72,206.88 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ನಿಫ್ಟಿ 1010.95 ಅಂಕಗಳಷ್ಟು ಕುಸಿತದೊಂದಿಗೆ 21,893.50 ಅಂಕಗಳ ಮಟ್ಟಕ್ಕೆ ಇಳಿಕೆಯಾಗಿದೆ.

ಏಪ್ರಿಲ್ 4ರಂದು ವಿದೇಶಿ ಇನ್ಸ್ ಟಿಟ್ಯೂಷನಲ್ ಮೌಲ್ಯದ ಹೂಡಿಕೆದಾರರು 3,483.98 ಕೋಟಿ ರೂ. ಮೌಲ್ಯದ ಭಾರತೀಯ ಈಕ್ವಿಟಿಗಳನ್ನು ಮಾರಾಟ ಮಾಡಿದ್ದರು. ಅದೇ ರೀತಿ ದೇಶೀಯ ಇನ್ಸ್ ಟಿಟ್ಯೂಷನಲ್ ಹೂಡಿಕೆದಾರರು 1,720.32 ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ಷೇರುಪೇಟಿಯ ಸೂಚ್ಯಂಕ, ನಿಫ್ಟಿಯ ಭಾರಿ ಕುಸಿತದಿಂದ 19 ಲಕ್ಷ ಕೋಟಿ ಕರಗಿ ಹೋಗಿದೆ. ಟಾಟಾ ಸ್ಟೀಲ್‌, ಇನ್ಫೋಸಿಸ್, ಟಾಟಾ ಮೋಟಾರ್ಸ್, ಎಚ್‌ಸಿಎಲ್‌ ಟೆಕ್‌ ಮತ್ತು ಟೆಕ್ ಮಹೇಂದ್ರ ಷೇರು ಶೇ. 10 ರಷ್ಟು ಕುಸಿತಕಂಡಿದೆ.

ಜಾಗತಿಕ ಮಟ್ಟದಲ್ಲಿ ಚೀನಾ, ಜಪಾನ್‌ ಸೇರಿದಂತೆ ಹಲವು ದೇಶಗಳ ಷೇರುಪೇಟೆ ಸೂಚ್ಯಂಕ ಕೂಡ ಭಾರಿ ಕುಸಿತ ಕಂಡಿದೆ. ನೆಫ್ಟಿಯೂ ಕೂಡ ಇಳಿಕೆಯಾಗಿರುವುದರಿಂದ ಹೂಡಿಕೆದಾರರಿಗೆ ಸಾಕಷ್ಟು ನಷ್ಟವುಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X