ಯಾರು ಯಾರಿಗೂ ಲಂಚ ಕೊಡುವ ಹಾಗಿಲ್ಲ – ತೆಗೆದುಕೊಳ್ಳುವ ಹಾಗಿಲ್ಲ: ಡಿಕೆ ಶಿವಕುಮಾರ್

Date:

Advertisements

ಯಾರು ಯಾರಿಗೂ ಲಂಚ ಕೊಡೋ ಹಾಗಿಲ್ಲ. ತಕೊಳೊ ಹಾಗಿಲ್ಲ. ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಭ್ರಷ್ಟಾಚಾರದ ವಿರುದ್ಧ ಜನರು ಮಾಹಿತಿ ನೀಡಲು ಫಲಕಗಳನ್ನು ಅಳವಡಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ರಾಮನಗರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. “ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳಿದ್ದೀರಿ. ಜನರ ಸಮಸ್ಯೆಗಳನ್ನು ಪರಿಹರಿಸುವುದು ರಾಜಕಾರಣಿ ಮತ್ತು ಅಧಿಕಾರಿಗಳ ಕರ್ತವ್ಯ. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು” ಎಂದು ಹೇಳಿದರು.

“ಬಿಜೆಪಿ ಆಡಳಿತವನ್ನು ಜನರು ನೋಡಿದ್ದಾರೆ. ರಾಜ್ಯಕ್ಕೆ ಭ್ರಷ್ಟಾಚಾರದ ರಾಜಧಾನಿ ಎನ್ನುವ ಹಣೆಪಟ್ಟಿಯನ್ನು ಬಿಜೆಪಿ ಸರ್ಕಾರ ತಂದಿದೆ. ಅದನ್ನು ಬದಲಾಯಿಸಬೇಕು. ಅಧಿಕಾರಿಗಳು ಲಂಚದಿಂದ ದೂರ ಉಳಿಯಬೇಕು” ಎಂದರು.

Advertisements

“ಎಲ್ಲ ಅಧಿಕಾರಿಗಳಿಗೂ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯ ಮಾಡಬೇಕು. ಕಚೇರಿಯ ಎಲ್ಲ ಅಧಿಕಾರಿಗಳ ಮಾಹಿತಿಯನ್ನು ಅವರ ಫೋಟೋ, ಹೆಸರು, ವಿಳಾಸಗಳೊಂದಿಗೆ ಪುಸ್ತಕ ಮಾಡಿಡಬೇಕು” ಎಂದು ಅವರು ಹೇಳಿದರು.

“ಒಂದು ತಿಂಗಳು ಅವಕಾಶ ಕೊಡುತ್ತೇನೆ. ಅಷ್ಟದಲ್ಲಿ ಎಲ್ಲ ಅಧಿಕಾರಿಗಳು ಹೆಡ್‌ ಕ್ವಾಟ್ರಸ್‌ನಲ್ಲಿ ಮನೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತಿಯಿಂದ ಹಿಡಿದು, ಉನ್ನತ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ಯಾರಾದರೂ ಹೆಡ್‌ ಕ್ವಾಟ್ರಸ್‌ ಬಿಟ್ಟು ಹೋದರೆ, ಜಿಲ್ಲಾಧಿಕಾರಿಗಳು ನಮಗೆ ಮಾಹಿತಿ ನೀಡಬೇಕು” ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X