ಗಡಿ ಪ್ರದೇಶಗಳಲ್ಲಿನ ಮತದಾರರಿಗೆ ಬಿಎಸ್‌ಎಫ್‌ ಯೋಧರಿಂದ ಬೆದರಿಕೆ: ಮಮತಾ ಬ್ಯಾನರ್ಜಿ ಆರೋಪ

Date:

Advertisements
  • ಪಂಚಾಯತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತು
  • 2021ರಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ

ರಾಜ್ಯದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡದಂತೆ ಗಡಿ ಗ್ರಾಮಗಳಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರು ಜನರಿಗೆ ಬೆದರಿಕೆ ಒಡ್ಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಜೂನ್ 26) ಆರೋಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸಂಬಂಧ ಬಿಎಸ್‌ಎಫ್ ಯೋಧರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇರಿಸಬೇಕು ಎಂದು ಮಮತಾ ಅವರು ರಾಜ್ಯ ಪೊಲೀಸರಿಗೆ ಸೂಚನೆ ನೀಡಿದರು.

ಮಮತಾ ಬ್ಯಾನರ್ಜಿ ಅವರು ಪಂಚಾಯತ್ ಚುನಾವಣೆಯ ಹಿನ್ನೆಲೆ ಕೂಚ್ ಬೆಹಾರ್ನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

Advertisements

“ಗಡಿ ಗ್ರಾಮಗಳಲ್ಲಿ ಬಿಎಸ್ಎಫ್ ಯೋಧರು ಮನೆಗೆ ತೆರಳಿ ಪಂಚಾಯತ್‌ ಚುನಾವಣೆಯಲ್ಲಿ ಮತದಾನ ಮಾಡದಂತೆ ಜನರಿಗೆ ಬೆದರಿಕೆ ಒಡ್ಡುವ ಬಗ್ಗೆ ನನಗೆ ಮಾಹಿತಿ ದೊರೆತಿದೆ. ಜನರು ಯಾವುದೇ ಕಾರಣಕ್ಕೂ ಭಯಪಡದೆ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ನಾನು ಮನವಿ ಮಾಡುತ್ತೇನೆ” ಎಂದು ಮಮತಾ ಹೇಳಿದ್ದಾರೆ.

“ಕಾನೂನು ಸುವ್ಯವಸ್ಥೆ ರಾಜ್ಯ ಪಟ್ಟಿಗೆ ಸೇರಿದ್ದು, ಕೇಂದ್ರ ಸರ್ಕಾರಕ್ಕೆ ಇದರಲ್ಲಿ ಯಾವುದೇ ಪಾತ್ರ ಇಲ್ಲ” ಎಂದು ಮಮತಾ ಕುಟುಕಿದರು.

ಮಮತಾ ಬ್ಯಾನರ್ಜಿ ಅವರು ಕಳೆದ ವರ್ಷ ರಾಜ್ಯದ ಗಡಿಯಲ್ಲಿ ಬಿಎಸ್ಎಫ್ ಯೋಧರು ಕಳ್ಳಸಾಗಣೆದಾರರೆಂಬ ಶಂಕೆಯ ಮೇರೆಗೆ ಗ್ರಾಮಸ್ಥರ ಮೇಲಿನ ಗುಂಡಿನ ದಾಳಿಯನ್ನು ಉಲ್ಲೇಖಿಸಿದರು.

“ಇಂತಹ ಘಟನೆಗಳಲ್ಲಿ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ. ಬಿಎಸ್ಎಫ್ ಯೋಧರಿಗೆ ಯಾರ ಮೇಲೂ ಗುಂಡು ಹಾರಿಸಿ ಕೊಲ್ಲುವ ಅಧಿಕಾರವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ” ಎಂದು ಅವರು ಹೇಳಿದರು.

“ಮುಂದಿನ ತಿಂಗಳು ರಾಜ್ಯದಲ್ಲಿ ನಡೆಯುವ ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಜೆಪಿಯನ್ನು ಸೋಲಿಸಲಿದೆ. ಕೇಂದ್ರದಲ್ಲೂ ಬಿಜೆಪಿಯನ್ನು ಸೋಲಿಸಿ ದೇಶದಲ್ಲಿ ಅಭಿವೃದ್ಧಿ ಪರ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ” ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಗೋಮಾಂಸ ಕಳ್ಳಸಾಗಣೆ ಆರೋಪ, ಮುಸ್ಲಿಂ ವ್ಯಕ್ತಿ ಹತ್ಯೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 2021ರಲ್ಲಿ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ ತಂದಿತು. ಈ ತಿದ್ದುಪಡಿಯು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಅಂತಾರಾಷ್ಟ್ರೀಯ ಗಡಿಯಿಂದ ಈ ಮುನ್ನ ಇದ್ದ 15 ಕಿ.ಮೀ ಬದಲಿಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಶೋಧ, ವಶಪಡಿಸಿಕೊಳ್ಳುವಿಕೆ ಮತ್ತು ಬಂಧನ ಮಾಡಲು ಬಿಎಸ್‌ಎಫ್‌ಗೆ ಅಧಿಕಾರ ನೀಡುತ್ತದೆ.

ರಾಜ್ಯದಲ್ಲಿ ಜುಲೈ 8 ರಂದು ಪಂಚಾಯತ್‌ ಚುನಾವಣೆಯು ನಡಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X