ರಾಜಕೀಯದಲ್ಲಿ ಎಲ್ಲ ಶಾಸಕರು ಸಿಂಹ ಆಗಲು ಸಾಧ್ಯವಿಲ್ಲ: ಸ್ಪೀಕರ್ ಖಾದರ್ ಅಭಿಮತ

Date:

Advertisements
  • ‘ನೀವೆಲ್ಲ ಪರ್ಮನೆಂಟ್ ಶಾಸಕರಾಗಿ ಉಳಿಯಬೇಕು’
  • ‘ರಾಜಕೀಯದಲ್ಲಿ ಶಾಸಕರು ರಿಂಗ್ ಮಾಸ್ಟರ್ ಆಗಲಿ’

ನೀವೆಲ್ಲ ಮೊದಲ ಬಾರಿಗೆ ಅಷ್ಟೇ ಶಾಸಕರಾಗದೆ ಪರ್ಮನೆಂಟ್ ಶಾಸಕರಾಗಿರಬೇಕು. ಅದಕ್ಕೆ ಈ ಶಿಬಿರ ಅನುಕೂಲವಾಗಲಿದೆ. ವಿಧಾನಸಭೆ ಒಳಗೆ ಆತ್ಮವಿಶ್ವಾಸದಿಂದಿರುವುದನ್ನು ಈ ಶಿಬಿರ ನಿಮಗೆ ಕಲಿಸಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದರು.

ಬೆಂಗಳೂರಿನ ಹೊರವಲಯದಲ್ಲಿ ಸೋಮವಾರ ನಡೆದ ನೂತನ ಶಾಸಕರ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ರಾಜಕೀಯ ಒಂದು ಸರ್ಕಸ್ ಕಂಪನಿ ಇದ್ದಂತೆ. ಇಲ್ಲಿ ಹುಲಿ, ಸಿಂಹ, ಆನೆ, ಕೋತಿ ಎಲ್ಲವೂ ಇರುತ್ತವೆ. ಆದರೆ ಎಲ್ಲರೂ ಸಿಂಹ ಆಗಲು ಸಾಧ್ಯವಿಲ್ಲ” ಎಂದರು.

“ಸರ್ಕಸ್‌ನಲ್ಲಿ ರಿಂಗ್ ಮಾಸ್ಟರ್ ಹಿಂದೆ ಎಲ್ಲ ಪ್ರಾಣಿಗಳು ಹೋಗುತ್ತವೆ. ಹಾಗೆ ರಾಜಕೀಯದಲ್ಲಿ ಶಾಸಕರು ರಿಂಗ್ ಮಾಸ್ಟರ್ ಆಗಬೇಕು. ಇದಕ್ಕಾಗಿ ಎಲ್ಲರೂ ಮಿಸ್ ಮಾಡದೆ ಉತ್ತಮ ತರಬೇತಿ ಪಡೆಯಿರಿ” ಎಂದು ಮನವಿ ಮಾಡಿದರು.‌

Advertisements

ಈ ಸುದ್ದಿ ಓದಿದ್ದೀರಾ? ತುತ್ತು ಅನ್ನಕ್ಕಾಗಿ ಬಡವರು ಬೇಡುತ್ತಿದ್ದುದನ್ನು ಕಣ್ಣಾರೆ ಕಂಡಿದ್ದೆ: ಸಿಎಂ ಸಿದ್ದರಾಮಯ್ಯ

“ಶಿಬಿರದಲ್ಲಿ ಆರೋಗ್ಯದ ಬಗ್ಗೆಯೂ ತರಬೇತಿ ನೀಡಲಾಗುತ್ತದೆ. ರಾಜಕೀಯ ಗಣಿತ ಅಲ್ಲ ಬದಲಿಗೆ ಕೆಮಿಸ್ಟ್ರಿ, ಇಲ್ಲಿ ರಿಯಾಕ್ಷನ್ಸ್ ಗಳು ಜಾಸ್ತಿ ಇರುತ್ತವೆ. ಎಲ್ಲದಕ್ಕೂ ತಾಳ್ಮೆಯಿಂದ ಉತ್ತರಿಸುವ ಗುಣ ಇರಬೇಕು” ಎಂದರು.

“ಉತ್ತಮ ಅಭ್ಯಾಸಗಳನ್ನು ಶಾಸಕರು ರೂಢಿಸಿಕೊಳ್ಳಬೇಕು. ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬೇಕು. ಶಾಸಕರಾಗಿ ಬ್ರಿಡ್ಜ್ ಕಟ್ಟುವುದು, ಮೋರಿ ಕಟ್ಟುವುದೇ ಆದ್ಯತೆ ಕೆಲಸಗಳು ಆಗದೇ ನಮ್ಮ ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವ ಕೆಲಸದ ಕಡೆಯೂ ಗಮನ ನೀಡಬೇಕು” ಎಂದು ಕಿವಿಮಾತು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X