ದಾವಣಗೆರೆ | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿಂ ಒಕ್ಕೂಟ ಸಭೆ, ವಿರೋಧಿಸಿ ಪ್ರತಿಭಟನೆ.

Date:

Advertisements

ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದ ನೂರಾನಿ ಶಾದಿಮಹಲ್‌ನಲ್ಲಿ ಖಂಡನಾ ಸಭೆ ನಡೆಸಲಾಯಿತು. ಖಂಡನಾ ಸಭೆಯಲ್ಲಿ ಮುಸ್ಲಿಂ ಒಕ್ಕೂಟದ ಸಂಚಾಲಕ ಟಿ.ಅಸ್ಗರ್ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಮುಸ್ಲಿಂ ಸಮುದಾಯವನ್ನು ಗುರಿಪಡಿಸುವುದೇ ಇದರ ಉದ್ದೇಶವಾಗಿದೆ” ಎಂದು ಪ್ರತಿಭಟಿಸಿ ಮುಸ್ಲಿಂ ಒಕ್ಕೂಟದ ಮುಖಂಡ ಅಸಮಾಧಾನ ವ್ಯಕ್ತಪಡಿಸಿದರು.

1001798969
ವಕ್ಫ್ ತಿದ್ದುಪಡಿ ವಿರುದ್ಧ ಮುಸ್ಲಿಂ ಒಕ್ಕೂಟ

“ನಮ್ಮ ಪೂರ್ವಜರು ಅಲ್ಲಾನನ್ನು ಸಂತೃಪ್ತಿ ಪಡಿಸಲು, ಮುಸ್ಲಿಮರ ಸಬಲೀಕರಣಕ್ಕಾಗಿ ದಾನ ಮಾಡಿದ ಜಮೀನು ವಕ್ಫ್ ಆಸ್ತಿಯಲ್ಲಿದೆ. ವಕ್ಫ್ ಸೇರಿರುವ ಜಮೀನುಗಳು ಯಾರಿಂದಲೋ ಕಬಳಿಸಿದ ಜಮೀನಲ್ಲ. ಧರ್ಮವನ್ನು ಬದಿಗಿಟ್ಟು ಎಲ್ಲಾ ಭಾರತೀಯರು ನಮ್ಮ ಜೊತೆ ಕೈ ಜೋಡಿಸಬೇಕೆಂದು ನಾವು ಕೇಳುತ್ತೇವೆ” ಮನವಿ ಮಾಡಿದರು..

“ಇಂದು ಮುಸ್ಲಿಮರು ಗುರಿಯಾಗಿದ್ದರೆ, ನಾಳೆ ಎಲ್ಲಾ ಶೋಷಿತ, ದಮನಿತ ವರ್ಗಗಳು ಹೆಜ್ಜೆ ಹೆಜ್ಜೆಗೆ ಗುರಿಯಾಗುತ್ತವೆ. ನಮ್ಮ ಹೋರಾಟ ಹಿಂದೂ-ಮುಸ್ಲಿಂ ಹೋರಾಟವಲ್ಲ. ನಮ್ಮ ಹೋರಾಟ ಹಿಂದೂಗಳ ವಿರುದ್ಧವಲ್ಲ. ನಮ್ಮ ಹೋರಾಟ ಸಂವಿಧಾನ ನೀಡಿರುವಂತಹ ಹಕ್ಕುಗಳನ್ನು ಪಡೆದುಕೊಳ್ಳುವುದಕ್ಕಾಗಿದೆ. ಈ ಕಾಯ್ದೆ ಮುಸ್ಲಿಮರ ಹಿತಕ್ಕೆ ವಿರುದ್ಧವಾಗಿದೆ. ಇದು ಮುಸ್ಲಿಮರ ಜಮೀನು ಕಬಳಿಸುವ ಯತ್ನವಾಗಿದೆ. ನಮ್ಮ ಸಂವಿಧಾನಾತ್ಮಕ ಮೌಲ್ಯಗಳಿಗೆ ಇದು ವಿರುದ್ದವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

Advertisements
1001798970

“ಸುಪ್ರೀಂ ಕೋರ್ಟ್ನಲ್ಲಿ ಈಗಾಗಲೇ ಈ ಕಾಯ್ದೆ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ. ದಾವಣಗೆರೆಯಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆ ನಿಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

ಈ ಸಂದರ್ಭದಲ್ಲಿ ವಕೀಲರಾದ ನಜೀರ್ ಅಹ್ಮದ್, ಮಹಮ್ಮದ್ ಅಲಿ ಶೋಯೇಬ್, ಮಹಮ್ಮದ್ ಅಲ್ತಾಫ್, ರಜ್ವಿ ರಿಯಾಜ್ ಸಾಬ್, ಇಸ್ಮಾಯಿಲ್ ಕಾಟ, ಆದಿಲ್, ಜಾಫರ್, ಕೋಳಿ ಇಬ್ರಾಹಿಂ ಸಾಬ್, ಶೇರಯಾರ ಜಂಗ ಸಾಬ್, ಸುಭಾನಿ, ಲಿಯಾಕತ್ ಅಲಿ, ಮುಜಾಹೀದ್, ಮುಜಾಮಿಲ್, ತಾಹೀರ್, ಇಮ್ರಾನ್, ನಿಜಾಮ, ರಫೀಕ್, ಸರ್ಫರಜ್, ಸದ್ಧಾಂ ಇತರರು ಉಪಸ್ಥಿತರಿದ್ದರು

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X