ವಿಜಯನಗರ | ನಿರಂತರ 7 ಗಂಟೆ ವಿದ್ಯುತ್ ಪೂರೈಸಿ; ಜೆಸ್ಕಾಂ ಅಧಿಕಾರಿಗಳಿಗೆ ಕರ್ನಾಟಕ ರೈತ ಸಂಘ ಆಗ್ರಹ

Date:

Advertisements

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರ್ಕಾರದ ಆದೇಶದಂತೆ ಕೂಡಲೇ ಹಗಲು 7 ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಪಟ್ಟಣದ ಜೆಸ್ಕಾಂ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರೈತ ಸಂಘ ಮುಖಂಡ ಬಿ.ಗೋಣಿಬಸಪ್ಪ ಮಾತನಾಡಿ, “ರೈತರ ಕೃಷಿ ಪಂಪ್‌ ಸೆಟ್ಟುಗಳಿಗೆ ಸರ್ಕಾರದ ಆದೇಶದಂತೆ ಹಗಲು 07 ಗಂಟೆ ವಿದ್ಯುತ್ ಪೂರೈಕೆ ಮಾಡಲು ಇಲಾಖೆಗೆ ಸಾಧ್ಯವಾಗುತ್ತಿಲ್ಲ. 66/11 ಕೆ.ವಿ ತಂಬ್ರಹಳ್ಳಿ ವಿದ್ಯುತ್ ಉಪಕೇಂದ್ರದ 2×12.8 MVA ಪರಿವರ್ತಕದ ಮೇಲೆ ಹೆಚ್ಚುವರಿ ಭಾರ ಆಗಿರುವುದರಿಂದ ಗುಣಮಟ್ಟದ ವಿದ್ಯುತ್ ಪೂರೈಸಲು ಆಗುತ್ತಿಲ್ಲ. ಇದನ್ನು 2 x 20 ವಿದ್ಯುತ್ ಪರಿನಿರ್ತಕ ಅಳವಡಿಸಲು ಈ ಹಿಂದೆ ಒತ್ತಾಯ ಮಾಡಿದ್ದೇವೆ. ಇಲ್ಲಿಯವರೆಗೂ ಕಾಮಗಾರಿ ಪ್ರಾರಂಭ ಆಗಿರುವುದಿಲ್ಲ. ಸರ್ಕಾರದಿಂದ ಹಣ ಬಿಡುಗಡೆಯಾದರೂ ಸಹ ಕಾಮಗಾರಿ ಪ್ರಾರಂಭವಾಗಿರುವುದಿಲ್ಲ. ಈ ಕೂಡಲೇ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

.

Advertisements

ರೈತ ಮುಖಂಡ ಬಾಣದ ಶಿವಪ್ಪ ಮಾತನಾಡಿ, ತಾಲೂಕಿನ ತೆಲುಗೋಳಿ ಹಾಗೂ ಜಿ.ಕೋಡಿಹಳ್ಳಿ ಗ್ರಾಮಗಳಲ್ಲಿ ಹೊಸದಾಗಿ ಸ್ಥಾಪನೆಯಾಗಬೇಕಾದ 66/11 ಕೆ.ವಿ. ವಿದ್ಯುತ್ ಉಪಕೇಂದ್ರ ಕಾಮಗಾರಿಗಳು ನಡೆದಿರುವುದಿಲ್ಲ. ಸರ್ಕಾರದಿಂದ ಹಣ ಬಿಡುಗಡೆಯಾದರೂ ಸಹ ಕಾಮಗಾರಿ ಪ್ರಾರಂಭವಾಗಿರುವುದಿಲ್ಲ. ಕೂಡಲೇ ಪ್ರಾರಂಭಿಸಬೇಕು. ಅಕ್ರಮ-ಸಕ್ರಮ ಯೋಜನೆ ಅಡಿಯಲ್ಲಿ ಕಳೆದ 05 ವರ್ಷಗಳಿಂದ ಯಾವುದೇ ಕಾಮಗಾರಿಗಳು ನಡೆದಿರುವುದಿಲ್ಲ. ಶೀಘ್ರ ಸಂಪರ್ಕ ಯೋಜನೆ ಅಡಿಯಲ್ಲಿ ವಿದ್ಯುತ್ ಪರಿವರ್ತಕಗಳನ್ನು ವಿತರಿಸುತ್ತಿಲ್ಲ. ಮತ್ತು ಯಾವುದೇ ಕೆಲಸಗಳು ರೈತರಿಗೆ ಆಗಿರುವುದಿಲ್ಲ” ಎಂದು ದೂರಿದರು.

ಈ ಸುದ್ಧಿ ಓದಿದ್ದಿರಾ?;ಕೊಪ್ಪಳ | ಕೈಗಾರಿಕಾ ತ್ಯಾಜ್ಯದಿಂದ ಪರಿಸರ ಮಾಲಿನ್ಯ; ಕಲ್ಯಾಣಿ ಸ್ಟೀಲ್ ಕಂಪನಿ ವಿರುದ್ಧ ಆಕ್ರೋಶ https://eedina.com/karnataka/koppal-environmental-pollution-due-to-industrial-waste-outrage-against-kalyani-steel-company/2025-04-09/

ಮೆಹ್ಬೂಬ್ ಸಾಹೆಬ್, ಮುದಕಪ್ಪ. ಬಿ, ಹರಟಿ ಕಾಳಪ್ಪ, ವಿ ನಾಗೇಂದ್ರ, ಕೆ.ನಿಂಗಪ್ಪ, ಕೆ.ಶಿವಪ್ಪ, ಹೆಚ್.ಶೇಕ್ರಪ್ಪ ಎ.ಡಿ.ಹಳ್ಳಿ, ಒತಪ್ಪ ಬಣಕಾರ, ಬಾಣದ ಶಿವಪ್ಪ, ಎ.ಬಸವರಾಜ್, ಹೆಚ್.ನಾಗರಾಜ್, ಜಿ.ವಸಂತಕುಮಾರ್, ರವಿಕುಮಾರ್ ತಂಬ್ರಳ್ಳಿ, ಹೆಚ್.ಮಹೇಶ, ಗಡ್ಡಿ ನಿಂಗಪ್ಪ, ಬಿ.ಸರಣಪ್ಪ, ಕೆ.ನಾಗೇಂದ್ರ ಹಾಗೂ ಇತರರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X