ಲೈಂಗಿಕ ದೌರ್ಜನ್ಯದ ಬಗ್ಗೆ ವಿವಾದಿತ ಹೇಳಿಕೆ: ಕ್ಷಮೆಯಾಚಿಸಿದ ಗೃಹ ಸಚಿವ ಪರಮೇಶ್ವರ್‌

Date:

Advertisements

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

“ಲೈಂಗಿಕ ದೌರ್ಜನ್ಯವನ್ನು ಸಹಜಗೊಳಿಸುವುದು ತಮ್ಮ ಹೇಳಿಕೆಯ ಉದ್ದೇಶವಾಗಿರಲಿಲ್ಲ..” ಎಂದು ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

“ನಿನ್ನೆ ನಾನು ನೀಡಿದ ಹೇಳಿಕೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಲಾಗಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ವ್ಯಕ್ತಿ. ನಿರ್ಭಯಾ ನಿಧಿಯನ್ನು ಮಹಿಳೆಯರ ಸುರಕ್ಷತೆಗಾಗಿ ಚೆನ್ನಾಗಿ ಬಳಸಿಕೊಳ್ಳಲಾಗಿದೆಯೆ ಎಂದು ನಾನು ಖಚಿತಪಡಿಸಿಕೊಂಡಿದ್ದೇನೆ. ನನ್ನ ಹೇಳಿಕೆಯನ್ನು ತಿರುಚುವುದು ನನಗೆ ಇಷ್ಟವಿಲ್ಲ. ಇದರಿಂದ ಯಾವುದೇ ಮಹಿಳೆಯರಿಗೆ ನೋವಾಗಿದ್ದರೆ, ನಾನು ವಿಷಾದ ವ್ಯಕ್ತಪಡಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ..” ಎಂದು ಪರಮೇಶ್ವರ್‌ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ಬೆಂಗಳೂರಿನ ತಮ್ಮ ನಿವಾಸದ ಬಳಿ ನಿನ್ನೆ ಮಾತನಾಡಿದ್ದ ಅವರು, ಇಷ್ಟು ದೊಡ್ಡ ಸಿಟಿಯಲ್ಲಿ ಅಲ್ಲಿ ಇಲ್ಲಿ ಇಂತಹ ಒಂದು ಘಟನೆಗಳು ಆಗುತ್ತವೆ. ನಿತ್ಯವೂ ಪೊಲೀಸ್ ಕಮಿಷನರ್​ಗೆ ಎಚ್ಚರಿಕೆಯಿಂದ ಇರಬೇಕು. ಬೀಟ್ ವ್ಯವಸ್ಥೆ ಚೆನ್ನಾಗಿ ಆಗಬೇಕು ಅಂತ ಹೇಳುತ್ತೇನೆ. ಪ್ರತಿ ಏರಿಯಾ ಮಾನಿಟರ್ ಮಾಡಬೇಕು. ಪೆಟ್ರೋಲಿಂಗ್ ಅನ್ನು ಶಿಸ್ತಿನಿಂದ, ಪರಿಣಾಮಕಾರಿಯಾಗಿ ಮಾಡಬೇಕು ಅಂತ ನಿತ್ಯ ಸೂಚನೆ ಕೊಡುತ್ತೇನೆ. ಅಲ್ಲೊಂದು ಇಲ್ಲೊಂದು ಘಟನೆ ಆದಾಗ ಸ್ವಾಭಾವಿಕವಾಗಿ ಜನರ ಗಮನ ಸೆಳೆಯುತ್ತದೆ. ಅಷ್ಟಕ್ಕೇ ನಾವು ಬಿಡೋದಿಲ್ಲ.

ನಿರಂತರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡ್ತಿದೆ. ದಿನವಿಡಿ ಮಳೆ, ಚಳಿ ಅನ್ನದೇ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಪಟ್ಟಣದಲ್ಲಿ ಅಲ್ಲೊಂದು ಇಲ್ಲೊಂದು ಘಟನೆ ಆಗುತ್ತದೆ. ಅದಕ್ಕೆ ನಾವು ಕಾನೂ‌ನು ಕ್ರಮ ತೆಗೆದುಕೊಳ್ಳುತ್ತೇವೆ. ಬೆಂಗಳೂರಲ್ಲಿ ಬೀಟ್ ವ್ಯವಸ್ಥೆ ಸುಧಾರಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಾನು ಪೊಲೀಸ್ ಕಮಿಷನರ್ ಜೊತೆಗೆ ಮಾತಾಡಿದ್ದೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X