ಹಾವೇರಿ | ಸಮೀಕ್ಷೆ ವೇಳೆ ಮಾದಾರ, ಮಾದಿಗ ಎಂದು ನಮೂದಿಸಲು ಸಮುದಾಯಕ್ಕೆ ಮನವಿ

Date:

Advertisements

ಪರಿಶಿಷ್ಟ ಜಾತಿಗಳ ಎಲ್ಲಾ ಕುಟುಂಬಗಳ ನಿಖರ ಮಾಹಿತಿಗಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗುತ್ತಿದ್ದು, ಅಧಿಕಾರಿಗಳು ಸಮೀಕ್ಷೆಗೆ ಬಂದಾಗ ಮಾದಿಗ ಅಥವಾ ಮಾದರ ಎಂದು ನಮೂದಿಸಬೇಕು ಎಂದು ಮಾದಿಗರ ಸಮಾಜದ ಮುಖಂಡ ಉಡಚಪ್ಪ ಮಾಳಗಿ ಹೇಳಿದರು.

ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ಕುರಿತು ಕರೆಯಲಾದ ಜಿಲ್ಲಾ ಮಟ್ಟದ ಮಾದಿಗ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು.

ಒಳಮೀಸಲಾತಿ ಸಮೀಕ್ಷೆ ಏ.6 ರಿಂದ ಪ್ರಾರಂಭವಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಸಮೀಕ್ಷೆಯ ಅಧಿಕಾರಿಗಳು ಆಗಮಿಸಿದಾಗ ಪರಿಶಿಷ್ಟ ಜಾತಿಗಳ ಸಮೀಕ್ಷೆಗೆ ಸಹಕಾರ ನೀಡುವ ಕೆಲಸವಾಗಬೇಕು. ಪರಿಶಿಷ್ಟ ಜಾತಿಯ ಆದಿ ಜಾಂಬವ, ಆದಿ ಡ್ರಾವಿಡ, ಎಸ್‌ಸಿ, ಆದಿ ಕರ್ನಾಟಕ ಹಾಗೂ ಹರಿಜನ ಪದಗಳನ್ನು ಬರೆಸಿರುವ ಮಾದಿಗ ಹಾಗೂ ಮಾದರ ಸಮುದಾಯದವರು ಜಾತಿ ಕಾಲಂನಲ್ಲಿ ಮಾದಿಗ ಅಥವಾ ಮಾದರ ಎಂದು ಬರೆಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಬೇರೆ ಪದಗಳನ್ನು ಬಳಸಿ ನಮಗೆ ಸಿಗಬಹುದಾಗ ಸೌಲಭ್ಯಗಳನ್ನು ಪಡೆಯುವ ಪ್ರಸಂಗಗಳು ಕಂಡು ಬರುತ್ತಿದೆ. ನಮ್ಮ ಸಮುದಾಯ ಸರ್ಕಾರಗಳ ಸೌಲಭ್ಯ ಪಡೆದು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕಾಗಿದೆ. ಸಮೀಕ್ಷೆ ಸಮಯದಲ್ಲಿ ಜಾಗೃತಿವಹಿಸುವುದು ಅಗತ್ಯವಾಗಿದ್ದು, ಏನಾದರೂ ತಮಗೆ ಹೆಚ್ಚಿನ ಮಾಹಿತಿ ಬೇಕಾದರೆ ಮಾದಿಗ ಸಮುದಾಯದ ಮುಖಂಡರುಗಳನ್ನು ಸಂಪರ್ಕಿಸಿ” ಎಂದು ತಿಳಿಸಿದರು.

Advertisements

ಇದನ್ನೂ ಓದಿ: ಹಾವೇರಿ | ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕೊಳೆತ ಆಹಾರ ಪೂರೈಕೆ: ಎಸ್ಎಫ್ಐ ಆರೋಪ

ಸಭೆಯಲ್ಲಿ ಸಮುದಾಯದ ಮುಖಂಡ ಬಸವರಾಜ ಹೆಡಿಗೊಂಡ, ಎಸ್ ಜಿ ಹೊನ್ನಪ್ಪನವರ, ಏಳಕೊಟೆಪ್ಪ ಎಸ್ ಪಾಟೀಲ, ಅಶೋಕ ಮರೆಯಣ್ಣನವರ, ಸಂಜಯಗಾಂಧಿ ಸಂಜೀವಣ್ಣನವರ, ಮಾರುತಿ ಸೊಟ್ಟಪ್ಪನವರ, ಸುರೇಶ ಅಳ್ಳಳ್ಳಿ, ಭೀಮಣ್ಣ ಯಲ್ಲಾಪುರ, ಶಿವಣ್ಣ ನಾಗಮ್ಮನವರ, ಮಂಜು ವಡ್ಡರ, ಯಲ್ಲಪ್ಪ ಅಂದಲಗಿ, ನಾಗರಾಜ ಮಾಳಮ್ಮನವರ, ಹನಮಂತ ಹಲಗೇರಿ, ಮಂಜು ದಿಡಗೂರ, ಗುಡ್ಡಪ್ಪ ಬಣಕಾರ, ಸುನೀಲ ಕಡೂರ, ನೀಲಪ್ಪ ದೇವರಮನಿ, ನಿಂಗಪ್ಪ ಹರಿಜನ, ಫಕ್ಕಿರೇಶ ಪುರದ, ಮಾರುತಿ ಬಣಕಾರ, ಗುತ್ತೆಪ್ಪ ಆಲದಕಟ್ಟಿ, ನವೀನ ಸಿದ್ದಣ್ಣನವರ, ಜಗದೀಶ ಹರಿಜನ, ನಾಗರಾಜ ಬಣಕಾರ ಸೇರಿದಂತೆ ಮಾದಿಗರ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X