ಧಾರವಾಡ | ಅಬಕಾರಿ ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಎಚ್ಚರಿಕೆ

Date:

Advertisements

ಸಾರಾಯಿ ದಂಧೆ ಎಗ್ಗಿಲ್ಲದೆ ಸಾಗುತ್ತಿರುವ ಬಗ್ಗೆ ಬಹುತೇಕ ದೂರುಗಳು ಬಂದಿವೆ. ಎರಡು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಧಾರವಾಡ ಜಿಲ್ಲೆಯ ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಾಕೀತು ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆಗೆ ಆಗಮಿಸಿದ್ದ ಅವರು ಅಬಕಾರಿ ಅಧಿಕಾರಿಗಳನ್ನು ಕರೆಯಿಸಿದ್ದು, “ಸಾರಾಯಿ ದಂಧೆ ಎಗ್ಗಿಲ್ಲದೆ ಸಾಗುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಜಾಗೃತಿ ವಹಿಸಿ, ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸಬೇಕು” ಎಂದು ಖಡಕ್ ಎಚ್ಚರಿಕೆ ನೀಡಿದರು.

“ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಮಾರಾಟ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮದ್ಯ ಮಾರಾಟದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳಬೇಕು. ಕಳೆದ 7 ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ‌” ಎಂದು ಕಲಘಟಗಿ ತಾಲೂಕಿನ ಮಹಿಳೆಯರು ಆರೋಪಿಸಿದರು.

Advertisements

ಗ್ರಾಮೀಣ ಕೂಲಿಕಾರರ ಸಂಘಟಕಿ ನಿಂಗಮ್ಮ ಸವಣೂರ‌ ಈ ದಿ‌ನ.ಕಾಮ್ ಜೊತೆಗೆ ಮಾತನಾಡಿ, “ನಾವೆಲ್ಲ ಸೇರಿಕೊಂಡು 2015 ರಿಂದ ಮದ್ಯ ನಿಷೇಧ ಆಂದೋಲನವನ್ನು ಸಕ್ರಿಯವಾಗಿ ನಡೆಸುತ್ತಿದ್ದೇವೆ. ಕರ್ನಾಟಕದ ಹಳ್ಳಿಗಳಲ್ಲಿ ಅಕ್ರಮ ಅಂಗಡಿಗಳ ಮೂಲಕ ಮದ್ಯದ ಮಾರಾಟವನ್ನು ನಿಲ್ಲಿಸಲು ಹೈಕೋರ್ಟ್ ಆದೇಶವನ್ನು ತಕ್ಷಣವೇ ಜಾರಿಗೊಳಿಸಿಬೇಕು. ಸಾರಯಿಯಿಂದ ಮಹಿಳೆಯರಿಗೆ ಭಾರೀ ಸಮಸ್ಯೆ ಉಂಟಾಗುತ್ತಿದೆ. 8ನೇ ತರಗತಿಯ ಚಿಕ್ಕ ವಯಸ್ಸಿನ ಮಕ್ಕಳೂ ಕುಡಿಯಲು ಪ್ರಾರಂಭಿಸಿರುವುದು ಸೋಜಿಗ ಎನಿಸಿದರೂ ನಿಜವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಮದ್ಯ ಸಾಗಾಟಕ್ಕೆ ಬಸ್ಸಿನಲ್ಲಿ ಅನುಮತಿ ನೀಡುವಂತೆ ಆಗ್ರಹ

“ಅಕ್ರಮ ಸಾರಾಯಿ ದಂಧೆ ಇರುವ ಗ್ರಾಮಗಳ ಪಟ್ಟಿಯನ್ನು ಸರ್ಕಾರದ ಗಮನ ಸೆಳೆಯಲು ಜಿಲ್ಲಾ ಅಬಕಾರಿ ಇಲಾಖೆಗೆ ಹಲವು ಬಾರಿ ಸಲ್ಲಿಸಿದ್ದರೂ ಏನೂ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X