IPL 2025 | ಹಿರಿಯರ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕಿರಿಯ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ

Date:

Advertisements

ಪಂಜಾಬ್ ಕಿಂಗ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ(priyansh arya) ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ (Punjab Kings vs Chennai Super Kings) ವಿರುದ್ಧ 39 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದರು. ಆ ಶತಕದಲ್ಲಿ ಒಂಬತ್ತು ಸಿಕ್ಸರ್‌ಗಳು ಮತ್ತು ಏಳು ಬೌಂಡರಿಗಳಿದ್ದದ್ದು ವಿಶೇಷವಾಗಿತ್ತು. ಒಂದೇ ಒಂದು ಪಂದ್ಯದ ಮೂಲಕ ಆರ್ಯ ಸ್ಟಾರ್ ಆಟಗಾರನಾಗಿ ಹೊರಹೊಮ್ಮಿದ್ದರು.

ಇದು 24 ವರ್ಷಗಳ ಪ್ರಿಯಾಂಶ್ ಆರ್ಯ ಅವರ ನಾಲ್ಕನೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯವಾಗಿತ್ತು. ಐದು ಬಾರಿಯ ಚಾಂಪಿಯನ್ ಎನಿಸಿಕೊಂಡ, 43 ವರ್ಷದ ಹಿರಿಯ ಆಟಗಾರ ಧೋನಿಯ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ್ರಿಯಾಂಶ್ ಆಟ ಎಲ್ಲರಿಗೂ ಶಾಕ್ ನೀಡಿತ್ತು.

ದಿಲ್ಲಿ ತಂಡದ ಆಕ್ರಮಣಕಾರಿ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ ಅವರನ್ನು ಪಂಜಾಬ್ ಕಿಂಗ್ಸ್ 3.8 ಕೋಟಿ ರೂಪಾಯಿಗೆ ಮೆಗಾ ಹರಾಜಿನಲ್ಲಿ ಖರೀದಿಸಿತ್ತು. ದಿಲ್ಲಿ ಪ್ರಿಮಿಯರ್ ಲೀಗ್‍ನಲ್ಲಿ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡದ ಪರ 10 ಇನ್ನಿಂಗ್ಸ್ ಗಳಲ್ಲಿ 608 ರನ್‍ಗಳನ್ನು ಸಿಡಿಸಿದ ದಾಖಲೆ ಇವರ ಬೆನ್ನಿಗಿತ್ತು. ನಾರ್ತ್ ಡೆಲ್ಲಿ ಸ್ಟ್ರೈಕರ್ಸ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಬಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದ್ದರು.

Advertisements

ಇದನ್ನು ಓದಿದ್ದೀರಾ?: ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ; ಶ್ರೀಘವೇ ಹೊಸ ಮಾನದಂಡ

2023-24ರ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ದಿಲ್ಲಿ ಪರ 7 ಇನ್ನಿಂಗ್ಸ್ ಗಳಲ್ಲಿ 31.71 ಸರಾಸರಿಯಲ್ಲಿ 166.91 ಸ್ಟ್ರೈಕ್‍ರೇಟ್‍ನಲ್ಲಿ 222 ರನ್ ಕಲೆ ಹಾಕಿದ್ದರು. 2024ರ ಐಪಿಎಲ್‍ಗೆ ಶಾರ್ಟ್‍ಲಿಸ್ಟ್ ಆಗಿದ್ದರೂ, ಯಾರೂ ಇವರನ್ನು ಖರೀದಿಸಿರಲಿಲ್ಲ.

ಐದು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡದ ಯುವ ಆಟಗಾರ ಮಂಗಳವಾರ ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿ ಗಮನ ಸೆಳೆದರು. 9 ಸಿಕ್ಸ್ ಮತ್ತು 7 ಬೌಂಡರಿ ಸಿಡಿಸಿ ನೂರ್ ಅಹ್ಮದ್‍ಗೆ ವಿಕೆಟ್ ಒಪ್ಪಿಸುವ ಮುನ್ನ 103 ರನ್ ಗಳಿಸಿದ ಯುವ ಆಟಗಾರ ಪೆವಿಲಿಯನ್‍ಗೆ ವಾಪಸ್ಸಾಗುವ ವೇಳೆ ಸಹ ಆಟಗಾರರು ಹಾಗೂ ತಂಡದ ಒಡತಿ ಪ್ರೀತಿ ಝಿಂಟಾ ಎದ್ದುನಿಂತು ಗೌರವ ಸೂಚಿಸಿದರು.

ಮೊದಲ ಪಂದ್ಯದಲ್ಲಿ ಹೊಡಿಬಡಿಯ 47 ರನ್ ಗಳಿಸಿದ್ದ ಆರ್ಯ ತಮ್ಮ ನಾಲ್ಕನೇ ಪಂದ್ಯದಲ್ಲಿ ವೇಗದ ಶತಕ ಗಳಿಸಿದರು. ಐಪಿಎಲ್ ಎಂದರೆ ಸಾಮಾನ್ಯವಾಗಿ ಹೊಸಬರ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ. ಈ ಬಾರಿಯ ಐಪಿಎಲ್ ನಲ್ಲಿ ಹೊಸ ಹುಡುಗರು ಚೆನ್ನಾಗಿ ಆಡಿ, ಎಲ್ಲರ ಗಮನ ಸೆಳೆಯುತ್ತಿರುವುದು, ಮಿಂಚುತ್ತಿರುವುದು ವಿಶೇಷ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X