ಮಾನ್ಸೂನ್ ಸಾಮಾನ್ಯ, ಕರಾವಳಿ ಕರ್ನಾಟಕದಲ್ಲಿ ಅಧಿಕ ಮಳೆ: ಖಾಸಗಿ ಹವಾಮಾನ ಸಂಸ್ಥೆ ಮುನ್ಸೂಚನೆ

Date:

Advertisements

2025ರಲ್ಲಿ ದೇಶದಲ್ಲಿ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ತಿಳಿಸಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ 868.6 ಮಿಮೀ ಸರಾಸರಿ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ. ಈ ವರ್ಷದ ಮಾನ್ಸೂನ್‌ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇನ್ನೂ ತನ್ನ ಮುನ್ಸೂಚನೆಯನ್ನು ಬಿಡುಗಡೆ ಮಾಡಿಲ್ಲ.

ಶೇಕಡ 96ರಿಂದ ಶೇಕಡ 106ರವರೆಗೆ ಪ್ರಮಾಣಿತ ವ್ಯಾಪ್ತಿಯಲ್ಲಿ ಸಾಮಾನ್ಯ ಮಾನ್ಸೂನ್ ನಿರೀಕ್ಷೆಯಿದೆ. ದೇಶದ ಶೇಕಡ 20ರಷ್ಟು ಪ್ರದೇಶದಲ್ಲಿ ಮಾತ್ರ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಉಳಿದ ಶೇಕಡ 80ರಷ್ಟು ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಹೇಳಿದೆ.

ಇದನ್ನು ಓದಿದ್ದೀರಾ? ಮುಂದಿನ ಐದು ದಿನ ತಾಪಮಾನ ಇಳಿಕೆ, ಚಳಿ ಹೆಚ್ಚಳ : ಹವಾಮಾನ ಇಲಾಖೆ

Advertisements

ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ಗೋವಾ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚುವರಿ ಮಳೆಯಾಗುವ ಸಾಧ್ಯತೆಯಿದೆ. ಇದು ಅನುಕೂಲಕರ ಮಳೆ ಎಂದು ಸ್ಕೈಮೆಟ್‌ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶವನ್ನು ಒಳಗೊಂಡಿರುವ ಕೇಂದ್ರ ಮಾನ್ಸೂನ್ ವಲಯದಲ್ಲಿಯೂ ಸಾಕಷ್ಟು ಮಳೆಯಾಗುವ ನಿರೀಕ್ಷೆಯಿದೆ. ಆದರೆ ಈಶಾನ್ಯ ಪ್ರದೇಶ ಮತ್ತು ಉತ್ತರ ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ಸ್ಕೈಮೆಟ್‌ನ ಮಾಸಿಕ ಮುನ್ಸೂಚನೆಯ ಪ್ರಕಾರ, ಜೂನ್‌ನಲ್ಲಿ ಶೇಕಡ 96, ಜುಲೈನಲ್ಲಿ ಶೇಕಡ 102, ಆಗಸ್ಟ್‌ನಲ್ಲಿ ಶೇಕಡ 108 ಮತ್ತು ಸೆಪ್ಟೆಂಬರ್‌ನಲ್ಲಿ ಶೇಕಡ 104ರಷ್ಟು ಮಳೆಯಾಗುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X