ಪರೀಕ್ಷೆ | ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ‘ಡಿ’ ಗ್ರೂಪ್‌ ನೌಕರ; ಪ್ರಾಂಶುಪಾಲ ಅಮಾನತು

Date:

Advertisements

ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದ ಉತ್ತರ ಪತ್ರಿಕೆಗಳನ್ನು ‘ಡಿ’ ಗ್ರೂಪ್‌ ನೌಕರನಿಂದ ಮೌಲ್ಯಮಾಪನ ಮಾಡಿದ್ದಾರೆ ಎಂಬ ಆರೋಪ ಮಧ್ಯಪ್ರದೇಶದ ಸರಕಾರಿ ಕಾಲೇಜೊಂದರಲ್ಲಿ ಕೇಳಿಬಂದಿದೆ. ‘ಡಿ’ ಗ್ರೂಪ್‌ ಮೌಲ್ಯಮಾಪನ ಮಾಡುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಕಾಲೇಜಿನ ಪ್ರಾಂಶುಪಾಲ ಮತ್ತು ಓರ್ವ ಪ್ರಾಧ್ಯಾಪಕರನ್ನು ಅಮಾನತು ಮಾಡಲಾಗಿದೆ.

ಮಧ್ಯಪ್ರದೇಶದ ಪೈಪರಿಯಲ್ಲಿರುವ ಭಗತ್‌ ಸಿಂಗ್ ಸರ್ಕಾರಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಉತ್ತರ ಪತ್ರಿಕೆಗಳನ್ನು ‘ಡಿ’ ಗ್ರೂಪ್‌ ಮೌಲ್ಯಮಾಪನ ಮಾಡುತ್ತಿರುವುದನ್ನು ವಿದ್ಯಾರ್ಥಿಗಳು ವಿಡಿಯೋ ಮಾಡಿಕೊಂಡಿದ್ದು, ಸ್ಥಳೀಯ ಶಾಸಕರು ಮತ್ತು ಶಿಕ್ಷಣ ಇಲಾಖೆಗೆ ದೂರು ನೀಡಿದ್ದಾರೆ. ಬಳಿಕ, ಕಾಲೇಜಿನ ಪ್ರಾಂಶುಪಾಲ ರಾಕೇಶ್ ವರ್ಮ ಮತ್ತು ಪ್ರಾಧ್ಯಾಪಕ ರಾಮ್ ಗುಲಾಂ ಪಟೇಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕಾಗಿ ಚಿಂಚ್ವಾಡದ ರಾಜಾ ಶಂಕರ್ ಶಾ ವಿಶ್ವದವಿದ್ಯಾಲಯವು ಪ್ರಾಧ್ಯಾಪಕ ರಾಮ್ ಗುಲಾಂ ಪಟೇಲ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ಭಗತ್‌ ಸಿಂಗ್‌ ಕಾಲೇಜಿಗೆ ನೇಮಿಸಿತ್ತು. ಆದರೆ, ಅವರು ಮೌಲ್ಯಮಾಪನದ ಕೆಲಸವನ್ನು ‘ಡಿ’ ಗ್ರೂಪ್‌ ನೌಕರನಿಂದ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಮಾನತುಗೊಂಡ ಪ್ರಾಂಶುಪಾಲ ರಾಕೇಶ್‌ ವರ್ಮ, “ರಾಮ್ ಗುಲಾಂ ಪಟೇಲ್ ಅವರನ್ನು ಮೌಲ್ಯಮಾಪನ ಕಾರ್ಯಕ್ಕೆ ನೇಮಿಸಲಾಗಿತ್ತು. ಅವರು ತಮ್ಮ ಕೆಲಸವನ್ನು ಬೇರೆ ನೌಕರನಿಂದ ಮಾಡಿದ್ದಾರೆ. ಆದರೆ, ಪ್ರಕರಣದಲ್ಲಿ ನನ್ನನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ತಮ್ಮ ಅಮಾನತು ಆದೇಶವನ್ನು ಹಿಂಪಡೆಯುವಂತೆ ಪ್ರೌಢ ಶಿಕ್ಷಣ ಮಂಡಳಿಗೆ ಪತ್ರ ಬರೆದಿರುವುದಾಗಿಯೂ ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X