ವಿಜಯಪುರ | ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿಂಪಡೆಯುವಂತೆ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಆಗ್ರಹ

Date:

Advertisements

ಹಾಲಿನ ದರ ಲೀಟರಿಗೆ ₹4, ವಿದ್ಯುತ್ ದರವನ್ನು ಯುನಿಟ್‌ಗೆ ₹35 ಹೈಸೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಲೀಟರಿಗೆ ₹2ನಂತೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವೂ ಎಲ್‌ಪಿಜಿ ಸಿಲಿಂಡರ್ ದರ ₹50 ಹಾಗೂ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹2 ಹೆಚ್ಚಿಸಿರುವ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ಮಾತನಾಡಿ, “ಹೈನುಗಾರರ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಎಂಬುದು ನಿಜವೇ. ಇದನ್ನು ಕಡಿಮೆ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಪಶು ಆಹಾರ, ಮೇವು, ಪಶು ವೈದ್ಯಕೀಯ ವೆಚ್ಚ ಮೊದಲಾದ ಹೈನುಗಾರಿಕೆಯ ಒಳಸುಳಿಗಳ ವೆಚ್ಚವನ್ನು ಸರ್ಕಾರ ಕಡಿತ ಮಾಡಬೇಕಿತ್ತು. ಬದಲಿಗೆ ಪ್ರತಿಬಾರಿಯೂ ವೆಚ್ಚದ ಹೊರೆಯನ್ನು ಸಾಮಾನ್ಯ ಗ್ರಾಹಕರ ಮೇಲೆ ವರ್ಗಾಯಿಸುತ್ತಲೇ ಇದೆ. ಇಂತಹ ನಡೆ ಸರಿಯಲ್ಲ” ಎಂದು ಆರೋಪಿಸಿದರು.

“ವಿದ್ಯುತ್ ದರವನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಸದ್ಯಕ್ಕೆ ಗೃಹಜ್ಯೋತಿ ಯೋಜನೆಯ ಕಾರಣಕ್ಕೆ ಇದರಿಂದ ಬಹುಪಾಲು ಗ್ರಾಹಕರಿಗೆ ಸಮಸ್ಯೆ ಆಗದೇ ಇರಬಹುದು. ಆದರೆ ವಾಣಿಜ್ಯ ಮತ್ತು ಸಣ್ಣ ಕೈಗಾರಿಕೆಗಳಿಗೆ ಇದು ಹೊರೆಯಾಗಲಿದೆ. ಕೆಎಂಎಫ್ ಮತ್ತು ವಿದ್ಯುತ್ ಕಂಪನಿಗಳ ದಕ್ಷತೆಯನ್ನು ಹೆಚ್ಚಿಸಿ, ಸೋರಿಕೆ, ಭ್ರಷ್ಟಾಚಾರ, ದುಂದುವೆಚ್ಚ ನಿಯಂತ್ರಣ ಮಾಡುವ ಕಡೆಗೆ ಸರ್ಕಾರ ಗಮನಹರಿಸಬೇಕು. ಹಾಲು ಮತ್ತು ವಿದ್ಯುತ್ ದರ ಏರಿಕೆಗಳು ಸೇರಿದಂತೆ ಇತರ ಉತ್ಪನ್ನಗಳ ಮೇಲೆ ಪರಿಣಾಮ ಬೀರಿ ಬೆಲೆ ಏರಿಕೆಯ ವಿಷಚಕ್ರಕ್ಕೆ ಕಾರಣವಾಗಲಿದೆ” ಎಂದರು.

Advertisements

ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯ ಡಾ. ಸುನೀತಕುಮಾರ ಮಾತನಾಡಿ, “ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರವು ಏರಿಕೆ ಮಾಡಿರುವುದರಿಂದ ಲೀಟರ್‌ಗೆ ₹2 ಹೆಚ್ಚಳವಾಗಿದೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿಯ ಸುಂಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶೇ.5ರಷ್ಟು ಏರಿಕೆ ಮಾಡಿದೆ. ಡೀಸೆಲ್ ಮತ್ತು ಹೆದ್ದಾರಿಗಳೆರಡೂ ಸಾರ್ವಜನಿಕ ಸಾರಿಗೆ ಮತ್ತು ಸರಕು ಸಾಗಾಣಿಕೆಗಳ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಪ್ರಯಾಣ ದರಗಳು, ಸಾಗಾಣಿಕೆ ವೆಚ್ಚ ಏರಿಕೆಯಾಗಿ ಅಗತ್ಯ ವಸ್ತುಗಳ ಬೆಲೆ ಇನ್ನಷ್ಟು ತುಟ್ಟಿಯಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

“ಇನ್ನೊಂದೆಡೆ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಮ್ಮ ಶಾಸಕರು ಹಾಗೂ ಸಂಸದರ ವೇತನವನ್ನು ದುಪ್ಪಟ್ಟು ಮಾಡಿಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಗ್ಯಾರಂಟಿಗಳ ಹೆಸರಲ್ಲಿ ಜನರನ್ನು ಒಲೈಸುವ ಸರ್ಕಾರಗಳು ಇನ್ನೊಂದು ಕಡೆಯಿಂದ ಬೆಲೆ ಏರಿಕೆಯ ಬರೆ ಹಾಕುವುದು ಖಂಡನೀಯವಾಗಿದೆ” ಎಂದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್ ಟಿ, ಶಿವಬಾಳಮ್ಮ ಕೊಂಡಗುಳ್ಳಿ, ಶಿವರಂಜನಿ ಹಾಗೂ ಸಿದ್ರಾಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X