ಟ್ರಂಪ್‌ ಸುಂಕ ಸಮರಕ್ಕೆ 90 ದಿನಗಳ ವಿರಾಮ; ಏಷ್ಯಾ ಷೇರುಪೇಟೆ ಜಿಗಿತ

Date:

Advertisements

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಾರಿದ್ದ ಸುಂಕ ಸಮರದಿಂದ ನೆಲಕಚ್ಚಿದ್ದ ಷೇರುಪೇಟೆ ಸೂಚ್ಯಂಕ ಇಂದು (ಏ.10) ಕೊಂಚ ಚೇತರಿಕೆ ಕಂಡಿದೆ.

ಜಗತ್ತಿನ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿರುವ ಅಮೆರಿಕದ ನೂತನ ಸುಂಕ ಹೇರಿಕೆ ಪ್ರಕ್ರಿಯೆಗೆ ಟ್ರಂಪ್ 90 ದಿನಗಳ ತಾತ್ಕಾಲಿಕ ವಿರಾಮ ಘೋಷಿಸಿದ್ದಾರೆ. ಇದರಿಂದ ಇಂದಿನ ಆರಂಭಿಕ ವಹಿವಾಟಿನಲ್ಲಿಯೇ ಏಷ್ಯಾದ ಷೇರುಗಳು ಏರಿಕೆ ಕಂಡಿವೆ.

ಜಪಾನ್‌ನ ಷೇರುಪೇಟೆ ಶೇ. 8.8ರಷ್ಟು ಜಿಗಿದಿದೆ. ಆಸ್ಟ್ರೇಲಿಯಾ ಸೂಚ್ಯಂಕ ಶೇ.5.1ರಷ್ಟು ಜಿಗಿದರೆ, ದಕ್ಷಿಣ ಕೊರಿಯಾ ಷೇರುಪೇಟೆ ಶೇ. 5.2ರಷ್ಟು ಏರಿಕೆಯಾಗಿದೆ. ಹಾಂಗ್ ಕಾಂಗ್ ಸೂಚ್ಯಂಕವು ಶೇ.4ರಷ್ಟು ಏರಿಕೆಯಾಗಿದೆ. ಶಾಂಘೈ ಮಾರುಕಟ್ಟೆಗಳೂ ಚೇತರಿಕೆ ಕಂಡಿವೆ. ಮಹಾವೀರ ಜಯಂತಿ ಹಿನ್ನೆಲೆ ಸಾರ್ವಜನಿಕ ರಜೆ ಇರುವುದರಿಂದ ಭಾರತೀಯ ಷೇರು ಮಾರುಕಟ್ಟೆಗಳು ಮುಚ್ಚಲ್ಪಟ್ಟಿವೆ.

Advertisements

ಅಮೆರಿಕ ಸರಕುಗಳ ಮೇಲಿನ ಸುಂಕವನ್ನು ಚೀನಾ ಶೇ.34ರಿಂದ ಶೇ.84ಕ್ಕೆ ಹೆಚ್ಚಿಸಿದ್ದಕ್ಕೆ ಪ್ರತಿಯಾಗಿ, ಟ್ರಂಪ್‌ ನಿನ್ನೆ ಚೀನಾ ಸರಕುಗಳ ಮೇಲಿನ ಸುಂಕವನ್ನು ಶೇ.125ಕ್ಕೆ ಹೆಚ್ಚಿಸಿದ್ದಾರೆ. ಇದೀಗ ಸುಂಕ ಪ್ರಕ್ರಿಯೆಗೆ ವಿರಾಮ ನೀಡಿರುವುದು ಕೆಲವು ದೇಶಗಳಿಗೆ ತಾತ್ಕಾಲಿಕ ಪರಿಹಾರ ದೊರೆತರೂ ಚೀನಾ ಹಾಗೂ ಅಮೆರಿಕ ನಡುವಿನ ವ್ಯಾಪಾರ ಯುದ್ಧ ಹೆಚ್ಚುತ್ತಲೇ ಇದೆ. ಇದು ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರಲಿದೆ ಎನ್ನುತ್ತಾರೆ ವಿಶ್ಲೇಷಕರು.

ಇದನ್ನೂ ಓದಿ: ಅಮೆರಿಕ ದಾಳಿ ಮಾಡಿದರೆ ಪರಮಾಣು ಅಸ್ತ್ರ ಬಳಕೆ: ಇರಾನ್‌ ಎಚ್ಚರಿಕೆ

ಸದ್ಯ ಅಮೆರಿಕದೊಂದಿಗೆ ಮಾತುಕತೆ ನಡೆಸುತ್ತಿರುವ ಭಾರತ ಸೇರಿದಂತೆ 75 ದೇಶಗಳಿಗೆ ಸುಂಕ ಕಡಿಮೆ ಮಾಡುವುದಾಗಿ ಟ್ರಂಪ್‌ ಹೇಳಿದ್ದು, 90 ದಿನಗಳ ವಿರಾಮದ ನಂತರ ಯಾವ ರೀತಿ ಸುಂಕ ನೀತಿ ರೂಪಿಸಲಿದ್ದಾರೆ ಎಂದು ಕಾದುನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X