ಗದಗ | ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

Date:

Advertisements

“ಭಗವಾನ್ ಮಹಾವೀರರು ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಚೇತನ. ಮಹಾವೀರರ ವಿಚಾರಧಾರೆಗಳು ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಸರ್ವೋದಯದ ಧರ್ಮತೀರ್ಥದಂತಿತ್ತು” ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಹೇಳಿದರು.

ಗದಗ ಪಟ್ಟಣದ ಜಿಲ್ಲಾಡಳಿತ ಭಾವನದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಗುರುವಾರ ಆಯೋಜಿಸಿದ್ದ ಭಗವಾನ್ ಶ್ರೀ ಮಹಾವೀರರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

“ಮಹಾವೀರ್ ಮಹಾರಾಜರು, ‘ಪ್ರಾಣಿ ಒದೆ, ಪ್ರಾಣಿ ಹಿಂಸೆ ಮಾಡಬಾರದು. ನಾವು ಕೂಡ ಪ್ರಕೃತಿಯ ಒಂದು ಭಾಗವಾಗಿರುವುದರಿಂದ ಯಾರನ್ನು ಹಿಂಸಿಸಬಾರದು’ ಎಂದು ಹೇಳಿದರು. ಪ್ರಾಣಿ  ಹಿಂಸೆ ಮಹಾಪಾಪವೆಂದು, ಅಹಿಂಸಾ ಪರಮೋ  ಧರ್ಮ ಎಂದು ಸಾರಿದರು” ಎಂದು ಹೇಳಿದರು.

Advertisements

“ಅತ್ಯಂತ ಸೂಕ್ಷ್ಮ ಪ್ರಾಣಿ ಕೂಡ ಪ್ರಕೃತಿಯ ಒಂದು ಭಾಗವಾಗಿರುವುದರಿಂದ ಪ್ರಾಣಿ ಹಿಂಸೆ ಮಹಾ ಪಾಪವೆಂದು ಬದುಕು ಮತ್ತು ಬದುಕಲಿಕ್ಕೆ ಬಿಡು ಎಂಬ ಮಾತು ಎಲ್ಲ ಕಾಲಕ್ಕೂ ಸಲ್ಲುತ್ತದೆ. ಶಾಂತಿ, ಸಹನೆ, ತಾಳ್ಮೆ ಜೀವನದ ಮಂತ್ರಗಳಾಗಬೇಕು. ಆ ಮೂಲಕ ಪರೋಪಕಾರ ಜೀವನ ಸಾಗಿಸಬೇಕೆಂಬ ಸಂದೇಶವನ್ನು ಭಗವಾನ್ ಮಹಾವೀರರು ನೀಡಿದ್ದಾರೆ. ಎಲ್ಲರೂ ಅವರ ಬದುಕಿನ ಆದರ್ಶಗಳನ್ನು ಪಾಲಿಸೋಣ” ಎಂದು ಸಿ ಎನ್ ಶ್ರೀಧರ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಂತರಾಷ್ಟ್ರೀಯ ಷಡ್ಯಂತ್ರಕ್ಕೆ ಬಲಿಯಾಗದೇ ಭವ್ಯ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕಿದೆ : ಶಾಸಕ ಶ್ರೀನಿವಾಸ ಮಾನೆ

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಸೇರಿದಂತೆ ಗಣ್ಯರು ಸಮಾಜದ ಮುಖಂಡರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X