ಹಾವೇರಿ | ಮಹಾವೀರರ ಬದುಕು ಮತ್ತು ಬೋಧನೆಗಳು ಸರ್ವಕಾಲಕ್ಕೂ ಆದರಣೀಯ

Date:

Advertisements

“ಸತ್ಯ, ಅಹಿಂಸೆ, ಕ್ಷಮೆ ಮುಂತಾದ ಮಾನವೀಯ ಮೌಲ್ಯಗಳ ನೆಲೆಯಲ್ಲಿ ಧಾರ್ಮಿಕ ಚಿಂತನೆಗಳನ್ನು ಪ್ರಚುರಪಡಿಸಿ ಪ್ರೀತಿಯ ಮೂಲಕ ವಿಶ್ವವನ್ನೇ ಗೆದ್ದ ದಿವ್ಯಪುರುಷ ಭಗವಾನ್ ಮಹಾವೀರರ ಬದುಕು ಮತ್ತು ಬೋಧನೆಗಳು ಸರ್ವಕಾಲಕ್ಕೂ ಆದರಣೀಯ” ಎಂದು ಶಂಕ್ರಪ್ಪ ಜಯಪ್ಪ ದುಂಡನ್ನವರ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕು ಬಾಳಂಬೀಡ ಗ್ರಾಮದಲ್ಲಿ ಜೈನ ಸಮಾಜದಿಂದ ಮೆರವಣಿಗೆ ಮೂಲಕ ಭಗವಾನ್ ಮಹಾವೀರ ಜಯಂತಿ ಆಚರಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

“ಮಹಾವೀರರ ಚಿಂತನೆಗಳು ಭಾಷಣಗಳಿಗೆ ಸೀಮಿತವಾಗದೇ ಬದುಕಿನ ಭಾಗವಾಗಬೇಕಿದೆ. ವಿಶ್ವಪ್ರೇಮ ಭ್ರಾತೃತ್ವ ಸಮಾಜವನ್ನು ಬೆಸೆಯಬೇಕಿದೆ. ಯುದ್ಧ ಮಾಡದೇ ಜಗತ್ತನ್ನು ಹೇಗೆ ಗೆಲ್ಲಬಹುದು ಎಂಬುದ ನ್ನು ತೋರಿಸಿಕೊಟ್ಟ ಮಹಾವೀರ ಶಾಂತಿ, ಅಹಿಂಸೆ ಮತ್ತು ಸಮಾನತೆಯ ಮಂತ್ರವನ್ನು ನಾವೆಲ್ಲರೂ ಪಾಲಿಸುವ ಸಂಕಲ್ಪ ಗೈಯೋಣ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ

ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಶ್ರೀಕಾಂತಪ್ಪ ದುಂಡಣ್ಣವರ, ಚಂದ್ರಪ್ಪ ಭದ್ರಾಪುರ್, ನಾಗಪ್ಪ ದುಂಡಣ್ಣವರ್, ರಾಜೇಂದ್ರ ಜಿನ್ನಣ್ಣನವರ್, ಮಂಜಪ್ಪ, ಪ್ರಕಾಶಪ್ಪ ದುಂಡಣ್ಣನವರ್, ದೇವರಾಜ್ ನಿಂಗಪ್ಪ ದುಂಡಣ್ಣವರ್, ಅಪ್ಪಣ್ಣ ಕಳಸೂರು, ಜಯಪ್ಪ, ಆನಂತಪ್ಪ ರಾಮಣ್ಣ ದುಂಡಣ್ಣವರ್, ನಾಗರಾಜ ಬೊಮ್ಮಣ್ಣವರ  ಇನ್ನಿತರರು ಕಾರ್ಯಕ್ರಮದಲ್ಲಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X